ಬ್ರೇಕಿಂಗ್ ನ್ಯೂಸ್
22-11-24 10:33 pm Mangalore Correspondent ಕರಾವಳಿ
ಉಳ್ಳಾಲ, ನ.22: ಗ್ರಾಮೀಣ ಪ್ರದೇಶ ಸಜಿಪದಿಂದ ಕಲ್ಲಾಪು ನಗರ ಪ್ರದೇಶಕ್ಕೆ ನೇತ್ರಾವತಿ ನದಿ ತೀರದಲ್ಲಿ ತಡೆಗೋಡೆ ಕಮ್ ನೇರ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಯ ಎರಡನೇ ಹಂತದ ಕಾಮಗಾರಿಗೆ ಸ್ಪೀಕರ್ ಯು.ಟಿ ಖಾದರ್ ಹರೇಕಳದಲ್ಲಿ ಶಿಲಾನ್ಯಾಸ ನೆರವೇರಿಸಿದರು.
ಸಜಿಪ ಗ್ರಾಮ ಮತ್ತು ಉಳ್ಳಾಲ ನಗರ ಪ್ರದೇಶ ಸಂಪರ್ಕ ರಸ್ತೆಯ ದೂರದೃಷ್ಟಿಯ ಯೋಜನೆಯ ಎರಡನೇ ಹಂತದ ಕಾಮಗಾರಿಗೆ ಶಿಲಾನ್ಯಾಸಗೈದ ಸ್ಪೀಕರ್ ಖಾದರ್ ಮಾತನಾಡಿ, ನೇತ್ರಾವತಿ ನದಿ ತೀರದಲ್ಲಿ ಹರೇಕಳದಿಂದ ಕಲ್ಲಾಪು ಸಂಪರ್ಕದ ತಡೆಗೋಡೆ ಮತ್ತು ರಸ್ತೆ ನಿರ್ಮಾಣ ಯೋಜನೆಯ ಮೊದಲ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದೆ.ಇದೀಗ ಹರೇಕಳ-ಪಾವೂರು-ಸಜಿಪಕ್ಕೆ ನೇರ ಸಂಪರ್ಕದ ತಡೆಗೋಡೆ ಮತ್ತು ರಸ್ತೆ ನಿರ್ಮಾಣದ ಎರಡನೇ ಹಂತದ ಕಾಮಗಾರಿಯು ಹನ್ನೆರಡು ಕೋಟಿ ರೂಪಾಯಿ ಅನುದಾನದಿಂದ ನಡೆಯಲಿದೆ. ಕಲ್ಲಾಪುವಿನಿಂದ ಸಜಿಪದ ವರೆಗಿನ ತಡೆಗೋಡೆ ಕಮ್ ರಸ್ತೆ ನಿರ್ಮಾಣ ಕಾಮಗಾರಿಗೆ ನೂರು ಕೋಟಿ ರೂಪಾಯಿ ಹೆಚ್ಚುವರಿ ಅನುದಾನದ ಪ್ರಸ್ತಾವನೆಯನ್ನ ಸಣ್ಣ ನೀರಾವರಿ ಸಚಿವರಿಗೆ ಸಲ್ಲಿಸಿದ್ದೇನೆ.


ನನ್ನ ಕ್ಷೇತ್ರದ ಎರಡು ಮಹತ್ತರ ಯೋಜನೆಗಳ ಪ್ರಸ್ತಾವನೆಯು ಅಂಗೀಕಾರವಾದ ನಂತರ, ಕಲ್ಲಾಪು-ಸಜಿಪ ರಸ್ತೆ ನಿರ್ಮಾಣ ಯೋಜನೆಗೆ ಹೆಚ್ಚುವರಿ ನೂರು ಕೋಟಿ ಅನುದಾನ ಬಿಡುಗಡೆಯಾಗುವ ವಿಶ್ವಾಸವಿದೆ. ಹಂತ ಹಂತವಾಗಿ ರಸ್ತೆ ನಿರ್ಮಾಣದ ಕೆಲಸ ಪೂರ್ಣಗೊಳ್ಳಲಿದೆ.ನೇತ್ರಾವತಿ ನದಿ ಪಾತ್ರದ ಜನರು ಮಳೆಗಾಲದ ನೆರೆಯಿಂದ ಬಹಳಷ್ಟು ಸಮಸ್ಯೆ ಅನುಭವಿಸಿದ್ದಾರೆ.ಅವರ ಸಹನೆ ಸಹಕಾರ ಎಂದಿಗೂ ಮರೆಯಲು ಸಾಧ್ಯವಿಲ್ಲ.
ನದಿ ತೀರದ ರಸ್ತೆ ನಿರ್ಮಾಣ ಯೋಜನೆ ಸಂಪೂರ್ಣಗೊಂಡ ಬಳಿಕ ಪಾವೂರು, ಹರೇಕಳ, ಸಜಿಪದಂತಹ ಗ್ರಾಮೀಣ ಭಾಗವು ನಗರ ಪ್ರದೇಶಕ್ಕೆ ಹತ್ತಿರವಾಗಿ ಚಿತ್ರಣವೇ ಬದಲಾಗಲಿದೆ. ಭವಿಷ್ಯದಲ್ಲಿ ಈ ರಸ್ತೆಯು ಜನರಿಗೆ ಬಹಳಷ್ಟು ಉಪಯೋಗಕಾರಿಯಾಗಲಿದ್ದು,ಹೊಸ ಯೋಜನೆಗಳು ಬಂದು ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಕಾಣಲಿದೆ ಎಂದರು.
ನಗರದಿಂದ ಪಾವೂರು ಉಳಿಯ ದ್ವೀಪ ಸಂಪರ್ಕದ ತೂಗುಸೇತುವೆ ನಿರ್ಮಾಣ ಯೋಜನೆಯೂ ಅಂತಿಮ ಹಂತದಲ್ಲಿದೆ. ಕಡತಗಳ ಕೆಲಸಗಳೆಲ್ಲವೂ ಮುಗಿದಿದ್ದು, ಶೀಘ್ರವೇ ಉಳಿಯ ಪ್ರದೇಶ ಸಂಪರ್ಕದ ತೂಗು ಸೇತುವೆಯೂ ನಿರ್ಮಾಣಗೊಳ್ಳಲಿದೆ ಎಂದು ಯು.ಟಿ.ಖಾದರ್ ಹೇಳಿದರು.
ಹರೇಕಳದಿಂದ ಸಜಿಪದ ವರೆಗೆ ದೋಣಿ ಮೂಲಕ ಸಾಗಿದ ಸ್ಪೀಕರ್ ಖಾದರ್ ಅವರು ತಡೆಗೋಡೆ ಕಮ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುವ ಪ್ರದೇಶದ ಸ್ಥಳ ಪರಿಶೀಲನೆ ನಡೆಸಿದರು. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು , ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರ್, ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಮಜೀದ್ ಮೊದಲಾದವರು ಉಪಸ್ಥಿತರಿದ್ದರು.
Barrier cum-road construction along Netravati banks from Sajipa village to Kallap, Speaker Khader inspects site by boat.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm