ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಆ.11ರವರೆಗೂ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ

08-08-20 12:16 pm       Mangalore Reporter   ಕರಾವಳಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬೆಳ್ತಂಗಡಿ, ಆ. 07: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಎರಡು ದಿನಗಳ ಹಿಂದೆ ಘಾಟ್ ನ ಆರನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು. ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಜರುಗಿದೆ. ಇಂದು ಬೃಹತ್ ಬಂಡೆಗಳು ರಸ್ತೆ ಮೇಲೆ ಉರುಳಿದ್ದು, ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆಯಾಗುತ್ತಿದ್ದು, ಅವಘಡಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ವಾಹನಗಳಿಗೆ ನಿಷೇಧ ಹೇರಲಾಗಿದೆ. ತಕ್ಷಣದಿಂದ ಆದೇಶ ಜಾರಿಗೆ ಬರುವಂತೆ ಆಗಸ್ಟ್‌ 11ರ ಮಧ್ಯ ರಾತ್ರಿವರೆಗೂ ಎಲ್ಲಾ ರೀತಿಯ ಸಂಚಾರವನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದಕ್ಕೆ ಬದಲಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಶಿರಾಡಿ ಘಾಟ್ ಗುಂಡ್ಯಾ ಮೂಲಕ ಸಂಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.