ಬ್ರೇಕಿಂಗ್ ನ್ಯೂಸ್
13-12-20 07:55 pm Mangaluru Correspondent ಕರಾವಳಿ
ಸುಳ್ಯ, ಡಿ.12: ಶಾಲಾ ಮೈದಾನಕ್ಕೆ ಸೈಕಲ್ ಕಲಿಯಲು ಬಂದಿದ್ದ ಎಂಟು ವರ್ಷದ ಬಾಲಕಿಯನ್ನು ಕೊಠಡಿಗೆ ಕರೆದೊಯ್ದ ಶಾಲೆಯ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸುಳ್ಯದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಹೆತ್ತವರ ದೂರಿನ ಮೇರೆಗೆ ಆಡಳಿತಾಧಿಕಾರಿಯನ್ನು ವಜಾಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ದೇವಚಳ್ಳ ಗ್ರಾಮದ ಎಲಿಮಲೆಯ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ತನ್ನ ಗೆಳತಿಯರೊಂದಿಗೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯ ಆವರಣದಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ಹೇಳಿದ್ದಾನೆ. ಈ ವೇಳೆ ಆಕೆಯನ್ನು ಪುಸಲಾಯಿಸಿ ತನ್ನ ಕೊಠಡಿಗೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಹೇಳಲಾಗುತ್ತಿದೆ. ನಂತರ ಮನೆಗೆ ತೆರಳಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

ಘಟನೆಯ ಕುರಿತು ಆರೋಪಿ ವ್ಯಕ್ತಿಯನ್ನು ಆಡಳಿತ ಮಂಡಳಿಯವರು ವಿಚಾರಿಸಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮನೆಯವರು ಪೊಲೀಸ್ ದೂರು ನೀಡದಂತೆ ಶಾಲೆಯ ಆಡಳಿತ ಮಂಡಳಿ ಮನವೊಲಿಸಿದ್ದಾರೆ. ಹೀಗಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಈ ವಿಚಾರ ಮಾಧ್ಯಮದಲ್ಲಿ ಬರುತ್ತಿದ್ದಂತೆ, ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಚೈಲ್ಡ್ ಲೈನ್ ಸಂಸ್ಥೆಯವರು ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಿ ವರದಿ ನೀಡಲಿದ್ದು ಕಿರುಕುಳ ಕಂಡುಬಂದರೆ ಪೊಲೀಸ್ ದೂರು ದಾಖಲಾಗುವ ಸಾಧ್ಯತೆ ಇದೆ.
ಇದು ಮೂರನೇ ಪ್ರಕರಣ !!
ಇದೇ ಶಾಲೆಯಲ್ಲಿ ಈ ಹಿಂದೆಯೂ ಇದೇ ರೀತಿಯದ್ದೇ ಪ್ರಕರಣ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಎರಡು ವರ್ಷಗಳ ಹಿಂದೆ ಇದೇ ಶಾಲೆಯ ಶಿಕ್ಷಕರಾಗಿದ್ದವರು ಸುಳ್ಯದಲ್ಲಿ ಬಾತ್ ರೂಮ್ ಒಂದರಲ್ಲಿ ಫೋಟೊ ಕ್ಲಿಕ್ಕಿಸಿ ಸಿಕ್ಕಿಬಿದ್ದಿದ್ದರು. ಆನಂತರ ಅವರನ್ನು ವಜಾ ಮಾಡಲಾಗಿತ್ತು. ಐದು ವರ್ಷಗಳ ಹಿಂದೆ ಶಿಕ್ಷಕಿಯೊಬ್ಬರು ಬೇರೊಬ್ಬರ ಜೊತೆ ಹೋಗಿದ್ದರೆಂದು ವಿವಾದ ಆಗಿತ್ತು. ಸಂಸ್ಕಾರದ ಶಿಕ್ಷಣ ನೀಡುವ ಶಾಲೆಯೊಂದು ಈ ರೀತಿಯ ಪ್ರಕರಣಗಳಿಂದ ಸುದ್ದಿಯಾಗಿರುವುದು ವಿಪರ್ಯಾಸ.
Eight-year-old Girl has been sexually Harassed by the School Administrator in Sullia, Dakshina Kannada. It is said the cruel act was done while the girl was cycling in the school ground.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am