ಬ್ರೇಕಿಂಗ್ ನ್ಯೂಸ್
13-12-20 07:55 pm Mangaluru Correspondent ಕರಾವಳಿ
ಸುಳ್ಯ, ಡಿ.12: ಶಾಲಾ ಮೈದಾನಕ್ಕೆ ಸೈಕಲ್ ಕಲಿಯಲು ಬಂದಿದ್ದ ಎಂಟು ವರ್ಷದ ಬಾಲಕಿಯನ್ನು ಕೊಠಡಿಗೆ ಕರೆದೊಯ್ದ ಶಾಲೆಯ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸುಳ್ಯದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಹೆತ್ತವರ ದೂರಿನ ಮೇರೆಗೆ ಆಡಳಿತಾಧಿಕಾರಿಯನ್ನು ವಜಾಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ದೇವಚಳ್ಳ ಗ್ರಾಮದ ಎಲಿಮಲೆಯ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ತನ್ನ ಗೆಳತಿಯರೊಂದಿಗೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯ ಆವರಣದಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ಹೇಳಿದ್ದಾನೆ. ಈ ವೇಳೆ ಆಕೆಯನ್ನು ಪುಸಲಾಯಿಸಿ ತನ್ನ ಕೊಠಡಿಗೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಹೇಳಲಾಗುತ್ತಿದೆ. ನಂತರ ಮನೆಗೆ ತೆರಳಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

ಘಟನೆಯ ಕುರಿತು ಆರೋಪಿ ವ್ಯಕ್ತಿಯನ್ನು ಆಡಳಿತ ಮಂಡಳಿಯವರು ವಿಚಾರಿಸಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮನೆಯವರು ಪೊಲೀಸ್ ದೂರು ನೀಡದಂತೆ ಶಾಲೆಯ ಆಡಳಿತ ಮಂಡಳಿ ಮನವೊಲಿಸಿದ್ದಾರೆ. ಹೀಗಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಈ ವಿಚಾರ ಮಾಧ್ಯಮದಲ್ಲಿ ಬರುತ್ತಿದ್ದಂತೆ, ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಚೈಲ್ಡ್ ಲೈನ್ ಸಂಸ್ಥೆಯವರು ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಿ ವರದಿ ನೀಡಲಿದ್ದು ಕಿರುಕುಳ ಕಂಡುಬಂದರೆ ಪೊಲೀಸ್ ದೂರು ದಾಖಲಾಗುವ ಸಾಧ್ಯತೆ ಇದೆ.
ಇದು ಮೂರನೇ ಪ್ರಕರಣ !!
ಇದೇ ಶಾಲೆಯಲ್ಲಿ ಈ ಹಿಂದೆಯೂ ಇದೇ ರೀತಿಯದ್ದೇ ಪ್ರಕರಣ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಎರಡು ವರ್ಷಗಳ ಹಿಂದೆ ಇದೇ ಶಾಲೆಯ ಶಿಕ್ಷಕರಾಗಿದ್ದವರು ಸುಳ್ಯದಲ್ಲಿ ಬಾತ್ ರೂಮ್ ಒಂದರಲ್ಲಿ ಫೋಟೊ ಕ್ಲಿಕ್ಕಿಸಿ ಸಿಕ್ಕಿಬಿದ್ದಿದ್ದರು. ಆನಂತರ ಅವರನ್ನು ವಜಾ ಮಾಡಲಾಗಿತ್ತು. ಐದು ವರ್ಷಗಳ ಹಿಂದೆ ಶಿಕ್ಷಕಿಯೊಬ್ಬರು ಬೇರೊಬ್ಬರ ಜೊತೆ ಹೋಗಿದ್ದರೆಂದು ವಿವಾದ ಆಗಿತ್ತು. ಸಂಸ್ಕಾರದ ಶಿಕ್ಷಣ ನೀಡುವ ಶಾಲೆಯೊಂದು ಈ ರೀತಿಯ ಪ್ರಕರಣಗಳಿಂದ ಸುದ್ದಿಯಾಗಿರುವುದು ವಿಪರ್ಯಾಸ.
Eight-year-old Girl has been sexually Harassed by the School Administrator in Sullia, Dakshina Kannada. It is said the cruel act was done while the girl was cycling in the school ground.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am