ಬ್ರೇಕಿಂಗ್ ನ್ಯೂಸ್
24-11-24 03:21 pm Mangalore Correspondent ಕರಾವಳಿ
ಉಡುಪಿ, ನ.23: ಪಶ್ಚಿಮ ಘಟ್ಟದ ಕಾಡಿನಲ್ಲಿಯೇ ಸುತ್ತಾಡುವ ನಕ್ಸಲರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೊಲೀಸರ ಕಣ್ತಪ್ಪಿಸಲು ರೈಲಿನಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿ ಲಭಿಸಿದೆ. ಎನ್ಕೌಂಟರ್ಗೆ ಬಲಿಯಾದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಹೋಗಿ ಆನಂತರ ಕಾಡಿಗೆ ತೆರಳಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎಲ್ಲ ಕಡೆ ಹೆಚ್ಚುವರಿ ಭದ್ರತೆ ಇದ್ದುದರಿಂದ ದಕ್ಷಿಣ ಕನ್ನಡ, ಕೊಡಗು ಗಡಿಭಾಗ ಕೂಜುಮಲೆ, ಕಡಮಕಲ್ಲು , ಸುಬ್ರಹ್ಮಣ್ಯ, ಬಿಳಿನೆಲೆ ಭಾಗದಲ್ಲಿ ಹೆಚ್ಚಿನ ದಿನಗಳನ್ನು ನಕ್ಸಲರು ಕಳೆದಿದ್ದರು. ಈ ವೇಳೆ ಇಲ್ಲಿನ ಅರಣ್ಯದಂಚಿನ ಮನೆಗಳಿಗೆ ಭೇಟಿ ನೀಡಿ ದಿನಸಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಕೊಂಡೊಯ್ದಿದ್ದು ವರದಿಯಾಗಿತ್ತು. ಅದೇ ಸಮಯದಲ್ಲಿ ಸುಬ್ರಹ್ಮಣ್ಯ ನೆಟ್ಟಣ ರೈಲು ನಿಲ್ದಾಣ ಮೂಲಕ ರೈಲಿನಲ್ಲಿ ಮುರ್ಡೇಶ್ವರ ಕಡೆಗೆ ಪ್ರಯಾಣಿಸಿದ್ದರು.
ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ ಇಳಿದು ಕಾಡು ಹತ್ತಿದ್ದ ಅವರು ಒಂದು ಬಾರಿ ಕೊಲ್ಲೂರು ಭಾಗದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿಂದ ಅವರು ಕಾಡು ದಾರಿಯಾಗಿ ಕಾರ್ಕಳ, ಹೆಬ್ರಿ ಭಾಗಕ್ಕೆ ಬಂದಿದ್ದರು. ಪೀತ ಬೈಲಿನಲ್ಲಿ ಎನ್ಕೌಂಟರ್ ಆಗುವ ಕೆಲವು ದಿನಗಳ ಹಿಂದೆಯಷ್ಟೆ ನಕ್ಸಲರು ಈದುವಿನಲ್ಲಿ ಕಾಣಿಸಿಕೊಂಡಿದ್ದರು. ನಕ್ಸಲರು ರೈಲಿನಲ್ಲಿ ಪ್ರಯಾಣಿಸುವಾಗ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ಯಾರಿಗೂ ತಿಳಿಯದಂತೆ ಗೌಪ್ಯತೆ ಕಾಪಾಡಿಕೊಂಡಿದ್ದರು ಎಂದು ತನಿಖೆ ವೇಳೆ ಮಾಹಿತಿ ಸಿಕ್ಕಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಕೇರಳ ಅರಣ್ಯದಲ್ಲಿದ್ದಾಗ ವಿಕ್ರಂ ಹಾಗೂ ಏಳು ಮಂದಿ ನಕ್ಸಲರ ತಂಡ ಸಕ್ರಿಯವಾಗಿತ್ತು. ಹತ್ತು ವರ್ಷಗಳಿಂದ ಅಲ್ಲಿಯೇ ಇದ್ದ ಈ ತಂಡದೊಳಗೆ ವೈಮನಸ್ಸು ಉಂಟಾಗಿತ್ತು. ಕೇರಳದ ನಕ್ಸಲ್ ನಾಯಕ ಸಂಯೋಯ್ ದೀಪಕ್, ಮೊಹಿಯುದ್ದೀನ್ ಅವರ ತಂಡಗಳೊಂದಿಗೆ ಭಿನ್ನಾಭಿಪ್ರಾಯ ಬೆಳೆದಿತ್ತು. ಸಂಘಟನೆ, ಹಣಕಾಸಿನ ವಿಚಾರದಲ್ಲಿ ಜಗಳವೂ ನಡೆದಿತ್ತು. ವಿಕ್ರಂ ಗೌಡ ಮತ್ತವರ ತಂಡ ಸಂಯೋಯ್ ತಂಡದಿಂದ 1 ಲಕ್ಷ ರೂ. ಪಡೆದಿತ್ತು. ಇದೇ ವಿಷಯದಲ್ಲಿ ತಕರಾರು ನಡೆದು ವಿಕ್ರಂ ಗೌಡ ಮತ್ತು ಜೊತೆಗಾರರ ತಂಡ ಕರ್ನಾಟಕದ ಕಡೆಗೆ ಎಂಟ್ರಿ ಕೊಟ್ಟಿದ್ದರು. ಹೆಚ್ಚಾಗಿ ಕಾಡಿನೊಳಗೇ ಇರುತ್ತಿದ್ದ ನಕ್ಸಲರು ಕೆಲವೊಮ್ಮೆ ಇತರೇ ಸಾರ್ವಜನಿಕರ ರೀತಿ ನಾಡಿಗೆ ಬಂದು ಹೋಗುತ್ತಿದ್ದರೇ ಎನ್ನುವ ಪ್ರಶ್ನೆ ಎದುರಾಗಿದೆ.
Police sources have revealed that the slain Naxal leader Vikram Gowda and his team had some time back travelled by train from Subrahmanya to Murdeshwar and then had proceeded on the forest path. Investigations have revealed that around Lok Sabha election time, the Naxals had spent most of the time in Koojumale, Kadamakallu, Subrahmanya and Bilinele region and had even visited some houses.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm