ಬ್ರೇಕಿಂಗ್ ನ್ಯೂಸ್
26-11-24 10:50 pm Mangalore Correspondent ಕರಾವಳಿ
ಮಂಗಳೂರು, ನ.26: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಮಹಿಳೆಯೊಬ್ಬರ ಮಗುವನ್ನು ಸಿಬಂದಿ ಮಾರಾಟ ಮಾಡಿದ್ದಾರೆ ಎಂದು ಬರೆದ ಪತ್ರವೊಂದು ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟನೆ ನೀಡಿದ್ದು, ಅಂತಹ ಆರೋಪ ನಿರಾಧಾರವಾದದ್ದು ಎಂದು ತಿಳಿಸಿದ್ದಾರೆ.
ಎಡಪದವು ನಿವಾಸಿ ಭವ್ಯ ಎನ್ನುವ ಮಹಿಳೆ ಬರೆದ ಪತ್ರದಲ್ಲಿ ಆಗಸ್ಟ್ 18ರಂದು ತಾನು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆದರೆ ತನ್ನ ಮಗುವನ್ನು ಸಿಬಂದಿ ಬೇರೆ ಯಾರಿಗೋ ಮಾರಾಟ ಮಾಡಿದ್ದಾರೆ. ತಾನು 9 ತಿಂಗಳು ಕಷ್ಟಪಟ್ಟು ಸಲಹಿದ್ದು ಈಗ ಮಗು ಇಲ್ಲದ ನೋವನ್ನು ಅನುಭವಿಸುತ್ತಿದ್ದೇನೆ, ನನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕೋರಲಾಗಿತ್ತು. ವಾಟ್ಸಪ್ ಜಾಲತಾಣದಲ್ಲಿ ಬರೆದು ಹಾಕಿದ್ದ ಪತ್ರವು ಕಳೆದ ಕೆಲವು ದಿನಗಳಿಂದ ಭಾರೀ ವೈರಲ್ ಆಗಿದ್ದು, ಮಾಧ್ಯಮದ ವಾಟ್ಸಪ್ ಗ್ರೂಪ್ ಗಳಲ್ಲಿಯೂ ಬಂದಿತ್ತು.

ಈ ಬಗ್ಗೆ ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಆಗಸ್ಟ್ 18ರಂದು ಭವ್ಯ ಎನ್ನುವ ಮಹಿಳೆಗೆ ಹೆರಿಗೆಯಾಗಿದ್ದು, ಮಗುವಿನ ಒಂದು ಕಣ್ಣಿನಲ್ಲಿ ಕಣ್ಣ ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಯ ಗಮನಕ್ಕೆ ತಂದಾಗ ಅದು ಮಗು ತನ್ನದಲ್ಲ ಎಂದು ನಿರಾಕರಿಸಿದ್ದಾರೆ. ಆಸ್ಪತ್ರೆಯ ಸಿಬಂದಿಯೇ ಅದಲು ಬದಲು ಮಾಡಿದ್ದಾರೆ ಎಂದು ಪೊಲೀಸರಿಗೂ ದೂರು ನೀಡಿದ್ದರು. ಆನಂತರ, ಪೊಲೀಸ್ ತನಿಖೆ ನಡೆದು ತಾಯಿ ಮತ್ತು ಮಗುವಿನ ಡಿಎನ್ಎ ಟೆಸ್ಟ್ ವರದಿಯನ್ನು ಸಂಬಂಧಿತರು ನ್ಯಾಯಾಧೀಶರಿಗೆ ಸಲ್ಲಿಸಿದ್ದಾರೆ.
ಸದ್ಯ ಮಹಿಳೆಯ ಮಗುವು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಆದರೆ ಇತ್ತೀಚಿನ ಎರಡು ದಿನಗಳಲ್ಲಿ ಸದ್ರಿ ಮಹಿಳೆಯು ತನ್ನ ಶಿಶುವನ್ನು ಆಸ್ಪತ್ರೆಯ ಸಿಬಂದಿ ಮಾರಾಟ ಮಾಡಿದ್ದಾರೆಂದು ಮಾನಹಾನಿಕರ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಹೆರಿಗೆ ಮತ್ತು ಸ್ತ್ರೀರೋಗ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಆಸ್ಪತ್ರೆಯ ಬಗ್ಗೆ ಕಳಂಕ ತಂದಿದ್ದಾರೆ. ಸದ್ರಿ ಪ್ರಕರಣ ನ್ಯಾಯಾಲಯದಲ್ಲಿದ್ದು ತೀರ್ಪನ್ನು ಗೌರವಪೂರ್ವಕವಾಗಿ ನಿರೀಕ್ಷಿಸುತ್ತಿದ್ದೇವೆ. ಈ ನಡುವೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಬಗ್ಗೆ ಮಾಡಿರುವ ಆರೋಪವು ನಿರಾಧಾರವಾಗಿರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Baby missing in Lady goschen Hospital letter goes viral, hospital issues clarification stating that no such incident has occured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm