ಬ್ರೇಕಿಂಗ್ ನ್ಯೂಸ್
28-11-24 03:24 pm Mangalore Correspondent ಕರಾವಳಿ
ಮಂಗಳೂರು, ನ.28: ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಜಿಹಾದಿಗಳಿಂದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ಕಿರುಕುಳ, ಹಿಂದೂ ದೇವಾಲಯಗಳು ಮತ್ತು ಪ್ರತಿಮೆಗಳನ್ನು ಅಪವಿತ್ರಗೊಳಿಸುವುದು ಮತ್ತು ಹಿಂದೂ ಆಸ್ತಿಗಳು, ಹಿಂದು ಜನರ ಮೇಲೆ ಹಲ್ಲೆ, ದಬ್ಬಾಳಿಕೆ ಮುಂದುವರೆದಿದೆ. ಹಿಂದು ಸಮಾಜದ ಪ್ರಮುಖರನ್ನು ಬಂಧಿಸಲಾಗುತ್ತಿದೆ. ಇಂತಹ ಕೃತ್ಯವನ್ನು ಖಂಡಿಸಿ ದೇಶಾದ್ಯಂತ ನ.29ರಂದು ವಿಶ್ವ ಹಿಂದು ಪರಿಷತ್ ಪ್ರತಿಭಟನೆ ನಡೆಸಲಿದೆ.
ಹಿಂದುಗಳ ಮೇಲಿನ ಹಲ್ಲೆ ಕೃತ್ಯವನ್ನು ತಡೆಯಲು ಸರಕಾರ ಯಾವುದೇ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಇವುಗಳನ್ನು ವಿರೋಧಿಸಿ ಹಿಂದೂ ಸಮಾಜವು ಢಾಕಾ, ಚಿತ್ತಗಾಂಗ್ ಮೊದಲಾದ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ಆಯೋಜಿಸಿದೆ. ವಿಶ್ವ ಸಮುದಾಯ ಮತ್ತು ಭಾರತ ಸರ್ಕಾರ ನಿರೀಕ್ಷೆಯಂತೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಭದ್ರತೆ ಮತ್ತು ಸಂಘಟನೆಗಾಗಿ ಹಿಂದೂ ಸಮಾಜವನ್ನು ಜಾಗೃತಗೊಳಿಸಿದ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದೆ.
ಹಿಂದೂ ನಾಯಕನ ಬಿಡುಗಡೆಗೆ ಒತ್ತಾಯಿಸಿ ಹಾಗೂ ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗಾಗಿ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಲು ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು, ಹೋಬಳಿಗಳಲ್ಲಿ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಾಗೂ ಬಂಧನವಾಗಿರುವ ಧಾರ್ಮಿಕ ಮುಖಂಡನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಘಟಕದ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ತಿಳಿಸಿದ್ದಾರೆ.
ಚಿನ್ಮೊಯ್ ಕೃಷ್ಣದಾಸ್ ಪ್ರಭು ಅವರ ಚಿತ್ರದೊಂದಿಗೆ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಬೇಕು. ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಕೊನೆಗಾಣಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಬೇಕು ಎಂದು ಪ್ರತಿಭಟನೆ ಸ್ವರೂಪದ ಬಗ್ಗೆ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
Mangalore Call for nationwide protest by VHP over attacks on Hindus in Bangladesh. Massive protests have rocked Bangladesh after the arrest of Hindu monk Chinmoy Krishna Das Prabhu at Dhaka airport on November 25. Saiful Islam Alif, a lawyer, was hacked to death when thousands gathered outside a court in Chittagong demanding the release of an arrested Hindu monk Chinmoy Krishna Das Prabhu, who was later denied bail and sent to jail on charges of sedition.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm