ಬ್ರೇಕಿಂಗ್ ನ್ಯೂಸ್
29-11-24 11:09 pm Udupi Correspondent ಕರಾವಳಿ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm