ಬ್ರೇಕಿಂಗ್ ನ್ಯೂಸ್
03-12-24 12:06 pm Mangalore Correspondent ಕರಾವಳಿ
ಮಂಗಳೂರು, ಡಿ.3: ಫೆಂಗಲ್ ಚಂಡಮಾರುತದ ಪ್ರಭಾವ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ತಟ್ಟಿದ್ದು ನಿನ್ನೆ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆಯಾಗಿದೆ. ರಾಜ್ಯದಲ್ಲಿ ಎಂಟು ಜಿಲ್ಲೆಗಳಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ.
ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಾತ್ರಿಯಿಡೀ ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಂಗಳವಾರ ಇಡೀ ದಿನ ಸಾಧಾರಣ ಮಳೆಯಾಗಲಿದ್ದು ಬುಧವಾರ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ.
ಮಂಗಳೂರು ಹೊರವಲಯದ ಏರ್ಪೋರ್ಟ್ ಬಳಿಯ ಅದ್ಯಪಾಡಿಯಲ್ಲಿ ರನ್ ವೇಯಿಂದ ಮಳೆ ನೀರು ಹರಿದು ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬವರ ಮನೆಗೆ ನೀರು ನುಗ್ಗಿದೆ. ಮನೆಯ ಅಂಗಳದಲ್ಲಿ ಪೂರ್ತಿಯಾಗಿ ಮಣ್ಣು ಬಿದ್ದಿದೆ. ಬಜ್ಪೆ - ಅದ್ಯಪಾಡಿ ಸಂಪರ್ಕ ರಸ್ತೆಯ ಮೇಲೂ ಕೆಸರು ಮಣ್ಣು ಬಿದ್ದು ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನರು ಬೆಳ್ಳಂಬೆಳಗ್ಗೆ ಕಷ್ಟ ಅನುಭವಿಸಿದ್ದಾರೆ.
ಉಡುಪಿಯಲ್ಲಿ ಬೈಂದೂರು, ಕುಂದಾಪುರ, ಹಾಲಾಡಿ, ಹೆಬ್ರಿ, ಕಾರ್ಕಳ, ಕೋಟ, ಸಾಲಿಗ್ರಾಮ, ಉಪ್ಪೂರು, ಬ್ರಹ್ಮಾವರ, ಹಿರಿಯಡ್ಕ, ಕಾಪು, ಕಟಪಾಡಿ, ಪಡುಬಿದ್ರಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಲ್ಪೆ ಬಂದರಿನಲ್ಲಿ ಬೋಟ್ಗಳು ಲಂಗರು ಹಾಕಿವೆ. ಮಂಗಳೂರು, ಉಡುಪಿ ಭಾಗದಲ್ಲಿ 20 ಸೆ.ಮೀ. ಹೆಚ್ಚು ಮಳೆಯಾಗಿದೆ. ಮಂಗಳೂರು 22, ಕಾರ್ಕಳ 26, ಕಾಪು ಹೆಜ್ಮಾಡಿಯಲ್ಲಿ 23 ಸೆ.ಮೀ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡು ಕಡೆಯಿಂದ ದಕ್ಷಿಣ ಕರ್ನಾಟಕ, ಉತ್ತರ ಕೇರಳದ ಮೂಲಕ ಅರಬ್ಬಿ ಸಮುದ್ರದತ್ತ ಚಂಡಮಾರುತ ಹಾದು ಹೋಗಿರುವ ಚಿತ್ರಣವನ್ನು ಹವಾಮಾನ ಇಲಾಖೆ ನೀಡಿದೆ. ಇದರ ಪರಿಣಾಮವಾಗಿ ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಉತ್ತರ ಕೇರಳದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಮಂಗಳೂರು ದಕ್ಕೆಯಲ್ಲಿ ನಿಲ್ಲಿಸಿದ್ದ ಪರ್ಶಿನ್ ಬೋಟ್ ಗಳಿಗೂ ಹಾನಿಯಾಗಿದೆ. ಚಂಡಮಾರುತದ ಅಬ್ಬರಕ್ಕೆ 10ಕ್ಕೂ ಹೆಚ್ಚು ಬೋಟ್ ನೀರುಪಾಲಾಗಿದೆ.
Cyclone Fengal, Torrential rains put Kerala Karnataka on edge,
Five districts of Karnataka locks down its schools. Cyclone Fengal, now weakened into a low-pressure area, continues to wreak havoc with heavy rainfall and disruptions across south India. The India Meteorological Department (IMD) has warned of intensified rainfall in Kerala as the system shifts toward the Arabian Sea near the Kerala and Karnataka coasts by December 3.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm