ಬ್ರೇಕಿಂಗ್ ನ್ಯೂಸ್
03-12-24 06:18 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜ್ಪೆ ಠಾಣೆಗೆ ಸಿಐಎಸ್ಎಫ್ ಸಿಬಂದಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್ ಎಲ್ ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಬೇಡಿಕೆ ಮುಂದಿಡಲಾಗಿದೆ.
ರಾಮೇಶ್ವರ ಕೆಫೆ ಬ್ಲಾಸ್ಟ್ ಅನ್ನು ಪಾಕ್ ಐಎಸ್ಐ ನವರು ತಮಿಳುನಾಡು ಡಿಜಿಪಿಯ ಪುತ್ರಿ ದೌಡಿ ಜೀವಾಲ್ ಎಂಬವರನ್ನು ಬಳಸಿಕೊಂಡು ಮಾಡಿದ್ದಾರೆ. ಜಮೇಶಾ ಮುಬೀನ್ ಎಂಬಾತ ಇದಕ್ಕೆ ಸಹಕಾರ ನೀಡಿದ್ದಾನೆ ಎಂದು ಇಮೇಲ್ ಸಂದೇಶದಲ್ಲಿ ಬರೆದಿರುವುದಲ್ಲದೆ, ವಿ.ಬಾಲಕೃಷ್ಣನ್ ಐಪಿಎಸ್, ಎಡ್ವಕೇಟ್ ಶ್ವೇತಾ, ವರುಣ್ ಐಪಿಎಸ್ ಎಂಬ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದಲ್ಲದೆ, ರಾಮೇಶ್ವರ ಕೆಫೆ ಪ್ರಕರಣವನ್ನು ಐಎಸ್ಐನವರು ಮಾತ್ರ ಮಾಡಿದ್ದಾಗಿ ಬಿಂಬಿಸಲಾಗಿದೆ.. ಹೀಗೆ ಹಲವು ವಿಚಾರಗಳನ್ನು ಅರೆಬರೆ ಇಂಗ್ಲಿಷ್ ನಲ್ಲಿರುವ ಬೆದರಿಕೆ ಸಂದೇಶದಲ್ಲಿ ಬರೆಯಲಾಗಿದೆ.
ಇದೇ ರೀತಿಯ ಬೆದರಿಕೆ ಸಂದೇಶ ಕಳೆದ ಅಕ್ಟೋಬರ್ 25ರಂದು ತಿರುಪತಿಯ ಎರಡು ಹೆಸರಾಂತ ಹೊಟೇಲ್ ಗಳಿಗೆ ಬಂದಿತ್ತು. ಅದರಲ್ಲಿಯೂ ಜಾಫರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖ ಆಗಿತ್ತು. ಮಂಗಳೂರು ಏರ್ಪೋರ್ಟಿಗೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಈ ಕೃತ್ಯದಲ್ಲಿ ಅಲ್ಲಿನವರೇ ಇರುವ ಸಾಧ್ಯತೆಯಿದೆ.
A bomb threat was issued to Mangalore International Airport via email, and a case has been registered at Bajpe Police Station. An email was sent to the CISF from akram_waikar@outlook.com. Bajpe police are now investigating the case.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm