ಬ್ರೇಕಿಂಗ್ ನ್ಯೂಸ್
03-12-24 06:18 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜ್ಪೆ ಠಾಣೆಗೆ ಸಿಐಎಸ್ಎಫ್ ಸಿಬಂದಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್ ಎಲ್ ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಬೇಡಿಕೆ ಮುಂದಿಡಲಾಗಿದೆ.
ರಾಮೇಶ್ವರ ಕೆಫೆ ಬ್ಲಾಸ್ಟ್ ಅನ್ನು ಪಾಕ್ ಐಎಸ್ಐ ನವರು ತಮಿಳುನಾಡು ಡಿಜಿಪಿಯ ಪುತ್ರಿ ದೌಡಿ ಜೀವಾಲ್ ಎಂಬವರನ್ನು ಬಳಸಿಕೊಂಡು ಮಾಡಿದ್ದಾರೆ. ಜಮೇಶಾ ಮುಬೀನ್ ಎಂಬಾತ ಇದಕ್ಕೆ ಸಹಕಾರ ನೀಡಿದ್ದಾನೆ ಎಂದು ಇಮೇಲ್ ಸಂದೇಶದಲ್ಲಿ ಬರೆದಿರುವುದಲ್ಲದೆ, ವಿ.ಬಾಲಕೃಷ್ಣನ್ ಐಪಿಎಸ್, ಎಡ್ವಕೇಟ್ ಶ್ವೇತಾ, ವರುಣ್ ಐಪಿಎಸ್ ಎಂಬ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದಲ್ಲದೆ, ರಾಮೇಶ್ವರ ಕೆಫೆ ಪ್ರಕರಣವನ್ನು ಐಎಸ್ಐನವರು ಮಾತ್ರ ಮಾಡಿದ್ದಾಗಿ ಬಿಂಬಿಸಲಾಗಿದೆ.. ಹೀಗೆ ಹಲವು ವಿಚಾರಗಳನ್ನು ಅರೆಬರೆ ಇಂಗ್ಲಿಷ್ ನಲ್ಲಿರುವ ಬೆದರಿಕೆ ಸಂದೇಶದಲ್ಲಿ ಬರೆಯಲಾಗಿದೆ.
ಇದೇ ರೀತಿಯ ಬೆದರಿಕೆ ಸಂದೇಶ ಕಳೆದ ಅಕ್ಟೋಬರ್ 25ರಂದು ತಿರುಪತಿಯ ಎರಡು ಹೆಸರಾಂತ ಹೊಟೇಲ್ ಗಳಿಗೆ ಬಂದಿತ್ತು. ಅದರಲ್ಲಿಯೂ ಜಾಫರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖ ಆಗಿತ್ತು. ಮಂಗಳೂರು ಏರ್ಪೋರ್ಟಿಗೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಈ ಕೃತ್ಯದಲ್ಲಿ ಅಲ್ಲಿನವರೇ ಇರುವ ಸಾಧ್ಯತೆಯಿದೆ.
A bomb threat was issued to Mangalore International Airport via email, and a case has been registered at Bajpe Police Station. An email was sent to the CISF from akram_waikar@outlook.com. Bajpe police are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm