ಬ್ರೇಕಿಂಗ್ ನ್ಯೂಸ್
03-12-24 11:05 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನಲ್ಲಿ ನಡೆಯುತ್ತಿರುವ ಫ್ರಾಡ್ ಸ್ಕೀಮ್ ಗಳ ಬಗ್ಗೆ ಉಪ ಲೋಕಾಯುಕ್ತ ಜಸ್ಟಿಸ್ ವೀರಪ್ಪ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಸ್ಕೀಮ್ ನಡೆಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಸೂಚಿಸಿದ್ದಾರೆ.
ಎರಡು ದಿನಗಳ ಕಾಲ ಸರ್ಕಾರಿ ಅಧಿಕಾರಿಗಳ ವಿರುದ್ಧ ನೂರಾರು ದೂರುಗಳನ್ನು ಸ್ವೀಕರಿಸಿದ ಅವರು ಮಂಗಳವಾರ ಸಂಜೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಮೊದಲು ಗಾರ್ಡನ್ ಸಿಟಿ ಆಗಿತ್ತು. ಈಗ ಗಾರ್ಬೇಜ್ ಸಿಟಿ ಆಗಿದೆ. ಹಿಂದೆ ಸಾವಿರ ಕೆರೆ ಇತ್ತು, ಈವಾಗ ಅಲ್ಲಿ ನೂರು ಕೆರೆನೂ ಇಲ್ಲ. ಇದರಿಂದಾಗಿ ಗಾರ್ಡನ್ ಸಿಟಿ ಹಾಳಾಗಿ ಹೋಗಿದೆ ಎಂದು ಹೇಳಿದ ಅವರು, ಪಚ್ಚನಾಡಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಘಟಕದಲ್ಲಿ 9 ಲಕ್ಷ ಟನ್ ಕಸದ ರಾಶಿ ಬಾಕಿ ಉಳಿದಿದ್ದು ಈವರೆಗೆ ಕೇವಲ ಒಂದು ಲಕ್ಷ ಟನ್ ಕಸವನ್ನು ವಿಲೇವಾರಿ ಮಾಡಲಾಗಿದೆ. ಉಳಿದ ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಈ ಕುರಿತು ಲೋಕಾಯುಕ್ತದಿಂದ ಸುಮೊಟೋ ಕೇಸ್ ದಾಖಲಿಸುತ್ತೇವೆ ಎಂದರು.
ವಿದ್ಯಾರ್ಥಿ ನಿಲಯ, ಕಾರಾಗೃಹ ಸೇರಿದಂತೆ ಸರಕಾರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಗತ್ಯ ಸೌಲಭ್ಯಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಅಲ್ಲದೆ, ವೈದ್ಯರು ಹೊರಗಡೆ ಚೀಟಿ ಬರೆದು ಕೊಡದಂತೆ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗೆ ಬಡ ರೋಗಿಗಳು ಬರುತ್ತಿದ್ದು ಅವರಿಗೆ ಚೀಟಿ ಕೊಟ್ಟು ಹೊರಗಡೆ ಕಳಿಸುವುದು ತಪ್ಪು. ಅದರಿಂದ ಸರ್ಕಾರದ ಆಸ್ಪತ್ರೆ ಉದ್ದೇಶ ಈಡೇರುವುದಿಲ್ಲ ಎಂದರು.
ಸಾರ್ವಜನಿಕ ಅಹವಾಲು ಕುಂದು ಕೊರತೆ ಸಭೆಯಲ್ಲಿ 193 ದೂರುಗಳು ಬಂದಿವೆ. ಈ ಪೈಕಿ 81 ದೂರುಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಲಾಗಿದೆ ಎಂದ ಉಪ ಲೋಕಾಯುಕ್ತರು, ಭ್ರಷ್ಟ ಅಧಿಕಾರಿಗಳನ್ನು ಟ್ರಾಪ್ ಮಾಡುವ ಲೋಕಾಯುಕ್ತ ಅಧಿಕಾರಿಗಳ ಮೇಲೆಯೂ ನಿಗಾ ಇಡಲಾಗುತ್ತಿದೆ. ಲೋಕಾಯುಕ್ತ ಅಧಿಕಾರಿಗಳನ್ನು ನಾವೇ ಟ್ರಾಕ್ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು ಅಧಿಕಾರಿಗಳನ್ನು ಸಂಸ್ಥೆಯಿಂದಲೇ ಹೊರಗೆ ಹಾಕಿದ್ದೇವೆ ಎಂದರು.
ಲೋಕಾಯುಕ್ತ ಅಧಿಕಾರಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಬಂದರೆ ತನಿಖೆ ನಡೆಸುತ್ತೇವೆ. ಅಂಥವರ ಮೇಲೆ ಕಾನೂನು ಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಾವು ಲೋಕಾಯುಕ್ತ ಪೊಲೀಸರನ್ನೂ ಬಿಡಲ್ಲಾ, ಲೋಕಲ್ ಪೊಲೀಸರನ್ನು ಬಿಡಲ್ಲಾ.. ಕೇವಲ ಮಾಹಿತಿ ಬಂದರೆ ಸಾಕು ಸುಮೊಟೋ ಕೇಸು ಹಾಕುತ್ತೇವೆ ಎಂದು ಹೇಳಿದರು.
Fraud illegal lucky draw companies in Mangalore, Upa Lokayukta Justice Veerappa orders for FIR to police commissioner Anupam Agarwal
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm