ಬ್ರೇಕಿಂಗ್ ನ್ಯೂಸ್
09-12-24 03:11 pm Mangalore Correspondent ಕರಾವಳಿ
ಉಳ್ಳಾಲ, ಡಿ.9: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು, ಉಚ್ಚಿಲದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ಹೈಡ್ರೋ ಕ್ಲೋರಿಕ್ ಆಸಿಡ್ ಸೋರಿಕೆಯಾಗಿದ್ದು, ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್ ಪಿಎಲ್ ತಜ್ಞರ ತಂಡ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರೋ ಕ್ಲೋರಿಕ್ ಆಸಿಡ್ ಹೊತ್ತೊಯ್ಯುತ್ತಿದ್ದ ಟ್ಯಾಂಕರಿನಲ್ಲಿ ತಾಂತ್ರಿಕ ದೋಷದಿಂದ ಆಸಿಡ್ ಸೋರಿಕೆಯುಂಟಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರನ್ನು ನಿಲ್ಲಿಸಿದ್ದಾರೆ. ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆಸಿಡ್ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳದಲ್ಲಿ ಅಗ್ನಿ ಶಾಮಕದಳ, ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಂಕರನ್ನು ಸ್ಥಳೀಯ ನಿರ್ಮಾಣ ಹಂತದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದು ,ಅನಿಲ ಸೋರಿಕೆ ಭಾಗಕ್ಕೆ ಎಮ್ಸಿಲ್ ಅಂಟಿಸಿದರೂ ಸೋರಿಕೆ ಮುಂದುವರಿದಿದ್ದು ಎಂಆರ್ ಪಿಎಲ್ ತಜ್ಞರ ತಂಡವನ್ನ ಸ್ಥಳಕ್ಕೆ ಕರೆಸಲಾಗಿದೆ.




ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಸಂಬಂಧ ಪಟ್ಟ ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ. ಏಸಿಡ್ ಸೋರಿಕೆಯಾದರೂ, ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಪೊಲೀಸರು ಗಂಭೀರ ವಹಿಸಿದಂತಿಲ್ಲ. ಸದ್ಯ ಟ್ಯಾಂಕರನ್ನು ಎಂಆರ್ ಪಿಎಲ್ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿರುವುದಾಗಿ ಉಳ್ಳಾಲ ತಹಸೀಲ್ದಾರ್ ತಿಳಿಸಿದ್ದಾರೆ.
Mangalore Gas tanker faces leakage of Hydrochloric acid at kotekar, MRPL team arrives, major accident averted
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm