ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am