ಬ್ರೇಕಿಂಗ್ ನ್ಯೂಸ್
09-12-24 11:05 pm Udupi Correspondent ಕರಾವಳಿ
ಕುಂದಾಪುರ, ಡಿ.9: ಗೋವಾಕ್ಕೆ ಬೈಕ್ ರೈಡಿಂಗ್ ಹೋಗಿ ಹಿಂತಿರುಗುತ್ತಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ಟ್ಯಾಂಕರ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಗಂಗೊಳ್ಳಿ ಠಾಣೆ ವ್ಯಾಪ್ತಿಯ ಮುಳ್ಳಿಕಟ್ಟೆ ಎಂಬಲ್ಲಿನ ಆರಾಟೆ ಸೇತುವೆ ಬಳಿ ನಡೆದಿದೆ.
ಮಂಗಳೂರಿನ ಕೆಬಿ ಯುವರಾಜ್ ಬಳ್ಳಾಲ್ ಅವರ ಪುತ್ರ ರಂಜಿತ್ ಬಳ್ಳಾಲ್ (59) ಮೃತ ವ್ಯಕ್ತಿ. ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ರಂಜಿತ್ ಬಳ್ಳಾಲ್ ಬೈಕ್ ಮೇಲಿನ ಕ್ರೇಜಿನಿಂದಾಗಿ ಮಂಗಳೂರಿನಿಂದ ಹತ್ತು ದಿನಗಳ ಹಿಂದೆ ಗೋವಾಕ್ಕೆ ಬೈಕಿನಲ್ಲಿ ತೆರಳಿದ್ದರು. ಸೋಮವಾರ ಸಂಜೆ ತನ್ನ ಬಿಎಂಡಬ್ಲ್ಯು ಬೈಕಿನಲ್ಲಿ ಮಂಗಳೂರಿನತ್ತ ಮರಳುತ್ತಿದ್ದಾಗ, ಗಂಗೊಳ್ಳಿಯ ಆರಾಟೆ ಸೇತುವೆ ಬಳಿ ಅಪಘಾತ ನಡೆದಿದೆ. ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಒಂದೇ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳನ್ನು ಬಿಡಲಾಗುತ್ತಿದೆ. ಇದರ ಬಗ್ಗೆ ಅರಿವಿರದ ರಂಜಿತ್ ಅವರು ನೇರವಾಗಿ ಓವರ್ ಟೇಕ್ ಮಾಡಿಕೊಂಡು ಬರುತ್ತಿದ್ದಾಗ ಮುಂದಿನಿಂದ ಬಂದ ಗ್ಯಾಸ್ ತುಂಬಿದ ಟ್ಯಾಂಕರ್ ಡಿಕ್ಕಿಯಾಗಿದೆ.
ಆಧುನಿಕ ಮಾದರಿಯ ಹೆಲ್ಮೆಟ್ ಹಾಕಿದ್ದರೂ, ಡಿಕ್ಕಿಯ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಂಜಿತ್ ಬಳ್ಳಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರಾಟೆ ಸೇತುವೆಯಲ್ಲಿ ಎರಡು ವಾರದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸರಣಿ ಅಪಘಾತಗಳು ನಡೆಯುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿ ನಿರ್ವಹಿಸುತ್ತಿರುವ ಐಆರ್ ಬಿ ಇನ್ ಫ್ರಾ ಸ್ಟ್ರಕ್ಚರ್ಸ್ ನವರ ನಿರ್ಲಕ್ಷ್ಯದಿಂದಾಗಿ ಅಪಘಾತ ಆಗಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರ ಅಪಘಾತ, ಸಾವು- ನೋವು ಆಗುತ್ತಿದ್ದರೂ ಅಧಿಕಾರಿಗಳು ಅಸಡ್ಡೆ ತೋರಿದ್ದಾರೆ.
A bike rider lost his life on the spot after colliding with a gas transport vehicle near Arate Bridge on National Highway 66 close to Mullikatte. The deceased has been identified as Ranjith Ballal, son of K B Yuvaraj Ballal, originally from Mangaluru and currently residing in Bengaluru.
16-01-25 05:30 pm
HK News Desk
Sp Belagavi, Minister Laxmi Hebbalkar car acc...
15-01-25 09:17 pm
ಮುಡಾ ಪ್ರಕರಣ ; ಸಿಬಿಐ ತನಿಖೆ ಕೋರಿದ್ದ ಅರ್ಜಿ ಜ.27ಕ...
15-01-25 08:22 pm
Dolly Chaiwala, Mangalore; ಅಮೆರಿಕದ ಬಿಲ್ ಗೇಟ್ಸ...
15-01-25 06:37 pm
Minister Zameer Ahmed, Bangalore; ಹಸು ಕೆಚ್ಚಲು...
15-01-25 06:21 pm
16-01-25 09:01 pm
HK News Desk
Actor Saif Ali Khan attack stabbed: ಬಾಲಿವುಡ್...
16-01-25 04:24 pm
Bonnie Blue: 12 ಗಂಟೆಯಲ್ಲಿ 1,000ಕ್ಕೂ ಅಧಿಕ ಪುರು...
15-01-25 10:51 pm
Mallikarjun Kharges, L N T chairman: ಕಾಂಗ್ರೆಸ...
15-01-25 10:06 pm
ಮಹಾ ಕುಂಭ ಮೇಳಕ್ಕೆ ಗೂಗಲ್ ಪುಷ್ಪ ವೃಷ್ಟಿ ! ಮೊಬೈಲ್...
14-01-25 07:18 pm
17-01-25 11:10 pm
Mangalore Correspondent
Mangalore court, Rape, Crime: ಇನ್ಸ್ಟಾಗ್ರಾಮ್ ನ...
17-01-25 10:58 pm
Ullal News, Mangalore: ಸೋಮೇಶ್ವರ ; ಬಾಡಿಗೆ ಮನೆಯ...
17-01-25 10:50 pm
Mangalore Koteker Bank Robbery, MP Brijesh Ch...
17-01-25 10:36 pm
CM Siddaramaiah, RGUHS Mangalore; ರಾಜೀವ ಗಾಂಧಿ...
17-01-25 07:42 pm
17-01-25 07:58 pm
Mangaluru Correspondent
Kotekar Bank Robbery, Mangalore Crime; ಬೀದರ್...
17-01-25 03:02 pm
Bidar SBI Bank Robbery Update, Hyderabad Firi...
17-01-25 02:48 pm
Bidar SBI Bank Robbery; ಬೀದರ್; ATM ಹಣಹಾಕಲು ಬಂ...
16-01-25 03:10 pm
Fake Stock Market scam, Mangalore, Police: ನಕ...
15-01-25 11:06 pm