ಬ್ರೇಕಿಂಗ್ ನ್ಯೂಸ್
09-12-24 11:05 pm Udupi Correspondent ಕರಾವಳಿ
ಕುಂದಾಪುರ, ಡಿ.9: ಗೋವಾಕ್ಕೆ ಬೈಕ್ ರೈಡಿಂಗ್ ಹೋಗಿ ಹಿಂತಿರುಗುತ್ತಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ಟ್ಯಾಂಕರ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಗಂಗೊಳ್ಳಿ ಠಾಣೆ ವ್ಯಾಪ್ತಿಯ ಮುಳ್ಳಿಕಟ್ಟೆ ಎಂಬಲ್ಲಿನ ಆರಾಟೆ ಸೇತುವೆ ಬಳಿ ನಡೆದಿದೆ.
ಮಂಗಳೂರಿನ ಕೆಬಿ ಯುವರಾಜ್ ಬಳ್ಳಾಲ್ ಅವರ ಪುತ್ರ ರಂಜಿತ್ ಬಳ್ಳಾಲ್ (59) ಮೃತ ವ್ಯಕ್ತಿ. ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ರಂಜಿತ್ ಬಳ್ಳಾಲ್ ಬೈಕ್ ಮೇಲಿನ ಕ್ರೇಜಿನಿಂದಾಗಿ ಮಂಗಳೂರಿನಿಂದ ಹತ್ತು ದಿನಗಳ ಹಿಂದೆ ಗೋವಾಕ್ಕೆ ಬೈಕಿನಲ್ಲಿ ತೆರಳಿದ್ದರು. ಸೋಮವಾರ ಸಂಜೆ ತನ್ನ ಬಿಎಂಡಬ್ಲ್ಯು ಬೈಕಿನಲ್ಲಿ ಮಂಗಳೂರಿನತ್ತ ಮರಳುತ್ತಿದ್ದಾಗ, ಗಂಗೊಳ್ಳಿಯ ಆರಾಟೆ ಸೇತುವೆ ಬಳಿ ಅಪಘಾತ ನಡೆದಿದೆ. ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಒಂದೇ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳನ್ನು ಬಿಡಲಾಗುತ್ತಿದೆ. ಇದರ ಬಗ್ಗೆ ಅರಿವಿರದ ರಂಜಿತ್ ಅವರು ನೇರವಾಗಿ ಓವರ್ ಟೇಕ್ ಮಾಡಿಕೊಂಡು ಬರುತ್ತಿದ್ದಾಗ ಮುಂದಿನಿಂದ ಬಂದ ಗ್ಯಾಸ್ ತುಂಬಿದ ಟ್ಯಾಂಕರ್ ಡಿಕ್ಕಿಯಾಗಿದೆ.



ಆಧುನಿಕ ಮಾದರಿಯ ಹೆಲ್ಮೆಟ್ ಹಾಕಿದ್ದರೂ, ಡಿಕ್ಕಿಯ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಂಜಿತ್ ಬಳ್ಳಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರಾಟೆ ಸೇತುವೆಯಲ್ಲಿ ಎರಡು ವಾರದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸರಣಿ ಅಪಘಾತಗಳು ನಡೆಯುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿ ನಿರ್ವಹಿಸುತ್ತಿರುವ ಐಆರ್ ಬಿ ಇನ್ ಫ್ರಾ ಸ್ಟ್ರಕ್ಚರ್ಸ್ ನವರ ನಿರ್ಲಕ್ಷ್ಯದಿಂದಾಗಿ ಅಪಘಾತ ಆಗಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರ ಅಪಘಾತ, ಸಾವು- ನೋವು ಆಗುತ್ತಿದ್ದರೂ ಅಧಿಕಾರಿಗಳು ಅಸಡ್ಡೆ ತೋರಿದ್ದಾರೆ.
A bike rider lost his life on the spot after colliding with a gas transport vehicle near Arate Bridge on National Highway 66 close to Mullikatte. The deceased has been identified as Ranjith Ballal, son of K B Yuvaraj Ballal, originally from Mangaluru and currently residing in Bengaluru.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm