ಬ್ರೇಕಿಂಗ್ ನ್ಯೂಸ್
15-12-24 05:27 pm Mangalore Correspondent ಕರಾವಳಿ
ಮಂಗಳೂರು, ಡಿ.15: ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಮುಚ್ಚಿ ಹಾಕಲು ಅನ್ವರ್ ಮಾಣಿಪ್ಪಾಡಿಗೆ ಬಿವೈ ವಿಜಯೇಂದ್ರ 150 ಕೋಟಿ ಆಮಿಷ ಒಡ್ಡಿದ್ದರೆಂಬ ಸಿಎಂ ಸಿದ್ದರಾಮಯ್ಯ ಆರೋಪವನ್ನು ವಕ್ಫ್ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ನಿರಾಕರಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅನ್ವರ್ ಮಾಣಿಪ್ಪಾಡಿ, 2012-13ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ರೆಡಿ ಮಾಡುತ್ತಿದ್ದಾಗ ವಿಜಯೇಂದ್ರ ಏನೂ ಆಗಿರಲಿಲ್ಲ. ಯಡಿಯೂರಪ್ಪ ಪುತ್ರ ಅಷ್ಟೇ ಆಗಿದ್ದರು. 2019ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ ವಕ್ಫ್ ಆಸ್ತಿ ಕುರಿತ ವರದಿ ಜಾರಿಗೊಳಿಸಬೇಕೆಂದು ಆಗ್ರಹ ಮಾಡಿದ್ದೆ. ಈ ವಿಷಯದಲ್ಲಿ ಬಿಜೆಪಿ ನಾಯಕರ ಬಗ್ಗೆ ಕೋಪಗೊಂಡಿದ್ದೆ. ಆಗ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ನನ್ನ ಜೊತೆಗೆ ಮಾತುಕತೆ ನಡೆಸಿದ್ದು ಹೌದು. ಆದರೆ ಯಾವುದೇ ಆಮಿಷವೊಡ್ಡಿದ್ದು ನನಗೆ ಗೊತ್ತಿಲ್ಲ ಎಂದಿದ್ದಾರೆ.
ಅದರ ಬದಲಾಗಿ ವರದಿ ಬಹಿರಂಗ ಮಾಡದಂತೆ ನನಗೆ ಕಾಂಗ್ರೆಸಿಗರೇ ಸಾವಿರ ಕೋಟಿ ಆಫರ್ ಮಾಡಿದ್ದರು. ಯಾಕಂದ್ರೆ, ವಕ್ಪ್ ಆಸ್ತಿ ಹಗರಣದಲ್ಲಿ ಕಾಂಗ್ರೆಸ್ ನಾಯಕರದ್ದೇ ಹೆಸರಿವೆ. ವರದಿ ಜಾರಿ ಮಾಡುತ್ತಿದ್ದರೆ ಕಾಂಗ್ರೆಸಿಗೇ ಮುಳುವಾಗುತ್ತಿತ್ತು. ಹಲವು ನಾಯಕರು ಜೈಲಿಗೆ ಹೋಗುವ ಸ್ಥಿತಿ ಬರುತ್ತಿತ್ತು. ಇದರಿಂದ ಬಚಾವ್ ಆಗಲು ನನಗೆ ಬಹಳಷ್ಟು ಆಮಿಷ ಒಡ್ಡಿದ್ದರು. 150 ಅಲ್ಲ, ಸಾವಿರಾರು ಕೋಟಿ ಕೊಡುವುದಕ್ಕೂ ರೆಡಿ ಇದ್ದರು. ಅಮೆರಿಕದಲ್ಲಿ ಹೋಗಿ ಸೆಟ್ಲ್ ಆಗುವುದಿದ್ದರೂ ವ್ಯವಸ್ಥೆ ಮಾಡುತ್ತೇವೆ ಎಂದಿದ್ದರು. ಆದರೆ ನಾನು ಎಲ್ಲವನ್ನೂ ನಿರಾಕರಿಸಿದ್ದೇನೆ. ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದೇನೆ. ಇದರ ಬಗ್ಗೆ ಪ್ರಧಾನಿಯವರಿಗೂ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ವಕ್ಫ್ ಆಸ್ತಿ ಕಬಳಿಕೆ ವರದಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಖಮರುಲ್ ಇಸ್ಲಾಂ, ಹ್ಯಾರಿಸ್, ರೋಷನ್ ಬೇಗ್ ಮತ್ತಿತರರ ಹೆಸರು ಇರೋದು ಸತ್ಯ. ವರದಿಯಲ್ಲಿ ಹೆಸರು ಬಂದವರು ಪ್ರಕರಣ ಮುಚ್ಚಿ ಹಾಕಲು ಆಫರ್ ನೀಡಲು ಬಂದಿದ್ದರು. ಅದು ಬಿಟ್ಟರೆ ಬಿಜೆಪಿ ಕಡೆಯಿಂದ ಆಫರ್ ಆಮಿಷ ಬಂದಿಲ್ಲ. ವರದಿ ಜಾರಿಗೊಳ್ತಿದ್ದರೆ ಕಾಂಗ್ರೆಸಿನ ದೊಡ್ಡ ಕುಳಗಳೇ ಸಿಕ್ಕಿಬೀಳುತ್ತಿದ್ದರು. ಬಿಜೆಪಿಯವರು ಮಾಡಿರಲಿಲ್ಲ.
ಈಗ ಸಿದ್ದರಾಮಯ್ಯ 1.60 ಲಕ್ಷ ಎಕರೆ ಆಸ್ತಿಗೆ ನೋಟಿಸ್ ಕೊಟ್ಟಿದ್ದು ಒಂದು ರೀತಿಯ ಬೋಗಸ್. ನಾವು ಕೊಟ್ಟ ವರದಿಯಲ್ಲಿ 27 ಸಾವಿರ ಎಕರೆ ವಕ್ಪ್ ಆಸ್ತಿ ಕಬಳಿಕೆ ಬಗ್ಗೆ ದಾಖಲೆ ಇದೆ. ಅದು ಬಿಟ್ಟು ಸಿದ್ದರಾಮಯ್ಯ ಒಂದೂವರೆ ಲಕ್ಷ ಎಕರೆಗೆ ನೋಟಿಸ್ ಕೊಟ್ಟಿದ್ದು ಹೇಗೆ ? ಅಷ್ಟೊಂದು ರೈತರಿಗೆ ನೋಟಿಸ್ ಕೊಟ್ಟಿದ್ದಾರೆ. ಆಸ್ತಿ ಕಬಳಿಸಿದ ಪ್ರಭಾವಿಗಳಿಗೆ ನೋಟಿಸ್ ಕೊಟ್ಟಿದ್ದಾರೆಯೇ. ಇವರಿಗೆ ವಕ್ಪ್ ಆಸ್ತಿ ತನಿಖೆ ಮಾಡಬೇಕೆಂಬ ಆಸಕ್ತಿ ಇಲ್ಲ, ಹೀಗೆ ಆರೋಪ ಮಾಡುತ್ತಾರೆ ಬಿಟ್ಟರೆ ತನಿಖೆ ಮಾಡಿಸುವುದಿಲ್ಲ. ಹಾಗಿದ್ದರೆ ಸಿಬಿಐ ತನಿಖೆಗೆ ಕೊಡಲಿ ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
Mangalore Anwar Manippady makes shoking allegations on waqf, says congress leaders offered thousands of crores to close the issue.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm