ಬ್ರೇಕಿಂಗ್ ನ್ಯೂಸ್
16-12-24 11:55 am Mangalore Correspondent ಕರಾವಳಿ
ಉಳ್ಳಾಲ, ಡಿ.16: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರ ಸ್ನಾನಕ್ಕಿಳಿದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ. ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಇತ್ತೀಚಿಗೆ ನಿಧನರಾಗಿದ್ದು ಇಂದು ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡಪ್ರದಾನ ನೆರವೇರಿಸಿದ ಬಳಿಕ ಉಷಾ ಅವರು ಸಮುದ್ರ ಸ್ನಾನ ಮಾಡಲು ತೆರಳಿದ್ದು ಕಾಲು ಜಾರಿ ಸಂಬಂಧಿಗಳು ನೋಡುತ್ತಿದ್ದಂತೆಯೇ ಸಮುದ್ರ ಪಾಲಾಗಿದ್ದಾರೆ.

ಸ್ಥಳೀಯರು ಮತ್ತು ನಾಡದೋಣಿಗರು ಸಮುದ್ರಕ್ಕೆ ಧುಮುಕಿ ಉಷಾ ಅವರನ್ನ ತೀರಕ್ಕೆ ಎಳೆದಿದ್ದು,ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು
ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಾಸಿದ್ದಾರೆ.
ಉಷಾ ಅವರು ಎನ್ಎಮ್ ಪಿಟಿಯಲ್ಲಿ ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಅವರು ಪುತ್ರಿಯನ್ನ ಅಗಲಿದ್ದಾರೆ.
ಶಾಶ್ವತ ಜೀವರಕ್ಷಕ ಸಿಬ್ಬಂದಿಗಳಿಲ್ಲ ;
ಸೋಮೇಶ್ವರ ಕಡಲ ತೀರಕ್ಕೆ ನಿತ್ಯವೂ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹಾಗಿದ್ದರೂ ಪ್ರವಾಸೋದ್ಯಮ ಇಲಾಖೆಯು ಇಲ್ಲಿ ಶಾಶ್ವತ ಜೀವರಕ್ಷಕ ಸಿಬ್ಬಂದಿಯನ್ನ ನಿಯೋಜಿಸಿಲ್ಲ. ಕರಾವಳಿ ಕಾವಲು ಪಡೆಯ ಅರೆಕಾಲಿಕ ಜೀವರಕ್ಷಕ ಸಿಬ್ಬಂದಿಗಳು ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಅನೇಕರ ಪ್ರಾಣ ರಕ್ಷಿಸಿದ್ದಾರೆ. ಶಾಶ್ವತವಾಗಿ ಇಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸಿದಲ್ಲಿ ಸಮದ್ರ ತೀರದಲ್ಲಿ ನಡೆಯುವ ಪ್ರಾಣಹಾನಿಗಳನ್ನ ತಪ್ಪಿಸಬಹುದಾಗಿದೆ.
Mangalore Someshwara 72 year old women drowned in sea while performing Pinda pradana. The deceased has been identified as Usha from Derebail.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm