ಬ್ರೇಕಿಂಗ್ ನ್ಯೂಸ್
16-12-24 11:55 am Mangalore Correspondent ಕರಾವಳಿ
ಉಳ್ಳಾಲ, ಡಿ.16: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರ ಸ್ನಾನಕ್ಕಿಳಿದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ. ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಇತ್ತೀಚಿಗೆ ನಿಧನರಾಗಿದ್ದು ಇಂದು ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡಪ್ರದಾನ ನೆರವೇರಿಸಿದ ಬಳಿಕ ಉಷಾ ಅವರು ಸಮುದ್ರ ಸ್ನಾನ ಮಾಡಲು ತೆರಳಿದ್ದು ಕಾಲು ಜಾರಿ ಸಂಬಂಧಿಗಳು ನೋಡುತ್ತಿದ್ದಂತೆಯೇ ಸಮುದ್ರ ಪಾಲಾಗಿದ್ದಾರೆ.
ಸ್ಥಳೀಯರು ಮತ್ತು ನಾಡದೋಣಿಗರು ಸಮುದ್ರಕ್ಕೆ ಧುಮುಕಿ ಉಷಾ ಅವರನ್ನ ತೀರಕ್ಕೆ ಎಳೆದಿದ್ದು,ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು
ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಾಸಿದ್ದಾರೆ.
ಉಷಾ ಅವರು ಎನ್ಎಮ್ ಪಿಟಿಯಲ್ಲಿ ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಅವರು ಪುತ್ರಿಯನ್ನ ಅಗಲಿದ್ದಾರೆ.
ಶಾಶ್ವತ ಜೀವರಕ್ಷಕ ಸಿಬ್ಬಂದಿಗಳಿಲ್ಲ ;
ಸೋಮೇಶ್ವರ ಕಡಲ ತೀರಕ್ಕೆ ನಿತ್ಯವೂ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹಾಗಿದ್ದರೂ ಪ್ರವಾಸೋದ್ಯಮ ಇಲಾಖೆಯು ಇಲ್ಲಿ ಶಾಶ್ವತ ಜೀವರಕ್ಷಕ ಸಿಬ್ಬಂದಿಯನ್ನ ನಿಯೋಜಿಸಿಲ್ಲ. ಕರಾವಳಿ ಕಾವಲು ಪಡೆಯ ಅರೆಕಾಲಿಕ ಜೀವರಕ್ಷಕ ಸಿಬ್ಬಂದಿಗಳು ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಅನೇಕರ ಪ್ರಾಣ ರಕ್ಷಿಸಿದ್ದಾರೆ. ಶಾಶ್ವತವಾಗಿ ಇಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸಿದಲ್ಲಿ ಸಮದ್ರ ತೀರದಲ್ಲಿ ನಡೆಯುವ ಪ್ರಾಣಹಾನಿಗಳನ್ನ ತಪ್ಪಿಸಬಹುದಾಗಿದೆ.
Mangalore Someshwara 72 year old women drowned in sea while performing Pinda pradana. The deceased has been identified as Usha from Derebail.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm