ಬ್ರೇಕಿಂಗ್ ನ್ಯೂಸ್
16-12-24 06:25 pm Mangalore Correspondent ಕರಾವಳಿ
ಮಂಗಳೂರು, ಡಿ.16: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಾನೂನು ಉಲ್ಲಂಘಿಸಿ ಮದುವೆ ಮಾಡಿದ್ದಕ್ಕಾಗಿ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಮತ್ತು ಗಂಡನ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಕ್ಸೋ ನ್ಯಾಯಾಲಯ ಆರೋಪಿತರಿಗೆ ಒಂದು ವರ್ಷ ಕಾಲ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್ (29), ಆತನ ತಂದೆ ಕೆ.ಐ ಮೊಹಮ್ಮದ್, ತಾಯಿ ಮೈಮೂನಾ, ಹುಡುಗಿ ತಂದೆ ಫರಂಗಿಪೇಟೆ ನಿವಾಸಿ ಅಬ್ದುಲ್ ಖಾದರ್ ಮತ್ತು ತಾಯಿ ರಮ್ಲತ್ ಒಂದು ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ. 2023ರ ಮೇ 31ರಂದು ಮೊಂಟೆಪದವು ಗ್ರಾಮದ ಮದುವೆ ಗಂಡಿನ ಮನೆಯಲ್ಲಿ ಮಹಮ್ಮದ್ ಇಂತಿಯಾಜ್ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಸಿದ್ದರು. ಹುಡುಗನ ತಂದೆ, ತಾಯಿ ಮತ್ತು ಹುಡುಗಿಯ ತಂದೆ, ತಾಯಿ ಸಮ್ಮುಖದಲ್ಲಿಯೇ ಮದುವೆ ನಡೆದಿತ್ತು.
ಆದರೆ ವಧುವಿಗೆ ಪ್ರಾಯ ಪೂರ್ತಿಯಾಗಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದರಂತೆ, ಮರುದಿನ ಜೂನ್ 1ರಂದು ತನಿಖೆ ನಡೆಸಿದ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವರ ಮತ್ತು ವಧುವಿನ ತಂದೆ, ತಾಯಿ ಹಾಗೂ ಮದುವೆ ಗಂಡು ವಿರುದ್ಧ ಕೇಸು ದಾಖಲಿಸಿದ್ದರು. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರಾಜೇಂದ್ರ ಬಿ. ಅವರು ತನಿಖೆ ಪೂರ್ತಿಗೊಳಿಸಿ ಪೋಕ್ಸೋ ಕಾಯ್ದೆಯ ಕಲಂ 6 ಮತ್ತು ಬಾಲ್ಯ ವಿವಾಹ ಕಾಯ್ದೆ ಕಲಂ 9, 10, 11ರಂದು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ಕೋರ್ಟಿನಲ್ಲಿ 10 ಸಾಕ್ಷಿದಾರರು ಮತ್ತು 22 ದಾಖಲೆಗಳನ್ನು ಪರಿಶೀಲಿಸಿ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಮಾನು ಕೆ.ಎಸ್ ತೀರ್ಪು ನೀಡಿದ್ದಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಕಲಂ 10 ಮತ್ತು 11ರಡಿಯಲ್ಲಿ ಒಂದು ವರ್ಷ ಕಾಲ ಆರೋಪಿತರಿಗೆ ತಲಾ ಒಂದು ವರ್ಷ ಕಾಲ ಶಿಕ್ಷೆ ಮತ್ತು ತಲಾ 5 ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ವಾದಿಸಿದ್ದರು. ಕೇಸು ದಾಖಲಾದ ಒಂದೂವರೆ ವರ್ಷದಲ್ಲಿ ಶಿಕ್ಷೆಯಾಗಿರುವುದು ವಿಶೇಷ.
The Additional District and Sessions Court - FTSC-II (Pocso) Judge Maanu K S has convicted five persons to one-year rigorous imprisonment and slapped a total fine of Rs 35,000, in a child marriage case under the Prohibition of Child Marriage Act
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm