ಬ್ರೇಕಿಂಗ್ ನ್ಯೂಸ್
16-12-24 06:25 pm Mangalore Correspondent ಕರಾವಳಿ
ಮಂಗಳೂರು, ಡಿ.16: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಾನೂನು ಉಲ್ಲಂಘಿಸಿ ಮದುವೆ ಮಾಡಿದ್ದಕ್ಕಾಗಿ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಮತ್ತು ಗಂಡನ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಕ್ಸೋ ನ್ಯಾಯಾಲಯ ಆರೋಪಿತರಿಗೆ ಒಂದು ವರ್ಷ ಕಾಲ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್ (29), ಆತನ ತಂದೆ ಕೆ.ಐ ಮೊಹಮ್ಮದ್, ತಾಯಿ ಮೈಮೂನಾ, ಹುಡುಗಿ ತಂದೆ ಫರಂಗಿಪೇಟೆ ನಿವಾಸಿ ಅಬ್ದುಲ್ ಖಾದರ್ ಮತ್ತು ತಾಯಿ ರಮ್ಲತ್ ಒಂದು ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ. 2023ರ ಮೇ 31ರಂದು ಮೊಂಟೆಪದವು ಗ್ರಾಮದ ಮದುವೆ ಗಂಡಿನ ಮನೆಯಲ್ಲಿ ಮಹಮ್ಮದ್ ಇಂತಿಯಾಜ್ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಸಿದ್ದರು. ಹುಡುಗನ ತಂದೆ, ತಾಯಿ ಮತ್ತು ಹುಡುಗಿಯ ತಂದೆ, ತಾಯಿ ಸಮ್ಮುಖದಲ್ಲಿಯೇ ಮದುವೆ ನಡೆದಿತ್ತು.
ಆದರೆ ವಧುವಿಗೆ ಪ್ರಾಯ ಪೂರ್ತಿಯಾಗಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದರಂತೆ, ಮರುದಿನ ಜೂನ್ 1ರಂದು ತನಿಖೆ ನಡೆಸಿದ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವರ ಮತ್ತು ವಧುವಿನ ತಂದೆ, ತಾಯಿ ಹಾಗೂ ಮದುವೆ ಗಂಡು ವಿರುದ್ಧ ಕೇಸು ದಾಖಲಿಸಿದ್ದರು. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರಾಜೇಂದ್ರ ಬಿ. ಅವರು ತನಿಖೆ ಪೂರ್ತಿಗೊಳಿಸಿ ಪೋಕ್ಸೋ ಕಾಯ್ದೆಯ ಕಲಂ 6 ಮತ್ತು ಬಾಲ್ಯ ವಿವಾಹ ಕಾಯ್ದೆ ಕಲಂ 9, 10, 11ರಂದು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ಕೋರ್ಟಿನಲ್ಲಿ 10 ಸಾಕ್ಷಿದಾರರು ಮತ್ತು 22 ದಾಖಲೆಗಳನ್ನು ಪರಿಶೀಲಿಸಿ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಮಾನು ಕೆ.ಎಸ್ ತೀರ್ಪು ನೀಡಿದ್ದಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಕಲಂ 10 ಮತ್ತು 11ರಡಿಯಲ್ಲಿ ಒಂದು ವರ್ಷ ಕಾಲ ಆರೋಪಿತರಿಗೆ ತಲಾ ಒಂದು ವರ್ಷ ಕಾಲ ಶಿಕ್ಷೆ ಮತ್ತು ತಲಾ 5 ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ವಾದಿಸಿದ್ದರು. ಕೇಸು ದಾಖಲಾದ ಒಂದೂವರೆ ವರ್ಷದಲ್ಲಿ ಶಿಕ್ಷೆಯಾಗಿರುವುದು ವಿಶೇಷ.
The Additional District and Sessions Court - FTSC-II (Pocso) Judge Maanu K S has convicted five persons to one-year rigorous imprisonment and slapped a total fine of Rs 35,000, in a child marriage case under the Prohibition of Child Marriage Act
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm