ಬ್ರೇಕಿಂಗ್ ನ್ಯೂಸ್
16-12-24 06:25 pm Mangalore Correspondent ಕರಾವಳಿ
ಮಂಗಳೂರು, ಡಿ.16: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಾನೂನು ಉಲ್ಲಂಘಿಸಿ ಮದುವೆ ಮಾಡಿದ್ದಕ್ಕಾಗಿ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಮತ್ತು ಗಂಡನ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಕ್ಸೋ ನ್ಯಾಯಾಲಯ ಆರೋಪಿತರಿಗೆ ಒಂದು ವರ್ಷ ಕಾಲ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್ (29), ಆತನ ತಂದೆ ಕೆ.ಐ ಮೊಹಮ್ಮದ್, ತಾಯಿ ಮೈಮೂನಾ, ಹುಡುಗಿ ತಂದೆ ಫರಂಗಿಪೇಟೆ ನಿವಾಸಿ ಅಬ್ದುಲ್ ಖಾದರ್ ಮತ್ತು ತಾಯಿ ರಮ್ಲತ್ ಒಂದು ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ. 2023ರ ಮೇ 31ರಂದು ಮೊಂಟೆಪದವು ಗ್ರಾಮದ ಮದುವೆ ಗಂಡಿನ ಮನೆಯಲ್ಲಿ ಮಹಮ್ಮದ್ ಇಂತಿಯಾಜ್ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಸಿದ್ದರು. ಹುಡುಗನ ತಂದೆ, ತಾಯಿ ಮತ್ತು ಹುಡುಗಿಯ ತಂದೆ, ತಾಯಿ ಸಮ್ಮುಖದಲ್ಲಿಯೇ ಮದುವೆ ನಡೆದಿತ್ತು.
ಆದರೆ ವಧುವಿಗೆ ಪ್ರಾಯ ಪೂರ್ತಿಯಾಗಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದರಂತೆ, ಮರುದಿನ ಜೂನ್ 1ರಂದು ತನಿಖೆ ನಡೆಸಿದ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವರ ಮತ್ತು ವಧುವಿನ ತಂದೆ, ತಾಯಿ ಹಾಗೂ ಮದುವೆ ಗಂಡು ವಿರುದ್ಧ ಕೇಸು ದಾಖಲಿಸಿದ್ದರು. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರಾಜೇಂದ್ರ ಬಿ. ಅವರು ತನಿಖೆ ಪೂರ್ತಿಗೊಳಿಸಿ ಪೋಕ್ಸೋ ಕಾಯ್ದೆಯ ಕಲಂ 6 ಮತ್ತು ಬಾಲ್ಯ ವಿವಾಹ ಕಾಯ್ದೆ ಕಲಂ 9, 10, 11ರಂದು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ಕೋರ್ಟಿನಲ್ಲಿ 10 ಸಾಕ್ಷಿದಾರರು ಮತ್ತು 22 ದಾಖಲೆಗಳನ್ನು ಪರಿಶೀಲಿಸಿ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಮಾನು ಕೆ.ಎಸ್ ತೀರ್ಪು ನೀಡಿದ್ದಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಕಲಂ 10 ಮತ್ತು 11ರಡಿಯಲ್ಲಿ ಒಂದು ವರ್ಷ ಕಾಲ ಆರೋಪಿತರಿಗೆ ತಲಾ ಒಂದು ವರ್ಷ ಕಾಲ ಶಿಕ್ಷೆ ಮತ್ತು ತಲಾ 5 ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ವಾದಿಸಿದ್ದರು. ಕೇಸು ದಾಖಲಾದ ಒಂದೂವರೆ ವರ್ಷದಲ್ಲಿ ಶಿಕ್ಷೆಯಾಗಿರುವುದು ವಿಶೇಷ.
The Additional District and Sessions Court - FTSC-II (Pocso) Judge Maanu K S has convicted five persons to one-year rigorous imprisonment and slapped a total fine of Rs 35,000, in a child marriage case under the Prohibition of Child Marriage Act
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm