ಬ್ರೇಕಿಂಗ್ ನ್ಯೂಸ್
19-12-24 01:53 pm Mangalore Correspondent ಕರಾವಳಿ
ಉಳ್ಳಾಲ, ಡಿ.18: ರಾ.ಹೆ. 66ರ ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ತೇಪೆ ಕಾಮಗಾರಿ ನಡೆಯುತ್ತಿದ್ದು ತೊಕ್ಕೊಟ್ಟಿನಿಂದ ನೇತ್ರಾವತಿ ಸೇತುವೆ ಸಂಪರ್ಕದ ಹೆದ್ದಾರಿಯ ಎಡ ಪಾರ್ಶ್ವದ ರಸ್ತೆಯುದ್ದಕ್ಕೂ ಕಳೆದೆರಡು ದಿನಗಳಿಂದ ದಿನವಿಡೀ ಸಂಚಾರ ವ್ಯತ್ಯಯವಾಗಿದೆ. ಟ್ರಾಫಿಕ್ ಜಾಮಲ್ಲಿ ಸಿಲುಕಿ ಸುಸ್ತಾದ ವಾಹನ ಸವಾರರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.
ಹಳೆಯ ನೇತ್ರಾವತಿ ಸೇತುವೆಯ ಗುಂಡಿಗಳಲ್ಲಿ ಕಬ್ಬಿಣದ ಸಲಾಕೆಗಳು ಎದ್ದು ನಿಂತಿದ್ದರಿಂದ ಕಾರಿನ ಟಯರ್ ಸಿಡಿದಿದ್ದು, ಸೇತುವೆಯ ದುಸ್ಥಿತಿಯ ಬಗ್ಗೆ ಕಾರು ಚಾಲಕ ಉಗಿದು ಮಾಡಿದ ವೀಡಿಯೋ ತುಣುಕೊಂದು ಎರಡು ದಿನಗಳ ಹಿಂದೆ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ನೋಡಿ ಎಚ್ಚೆತ್ತ ಅಧಿಕಾರಿಗಳು ಸೇತುವೆಯ ತೇಪೆ ಕಾಮಗಾರಿ ನಡೆಸಲಾರಂಭಿಸಿದ್ದಾರೆ.
















ಬುಧವಾರ ಬೆಳಗ್ಗಿನಿಂದಲೂ ಸೇತುವೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇಂದು ಗುರುವಾರವೂ ಅದೇ ಸ್ಥಿತಿ ಮುಂದುವರಿದಿದೆ. ಬೆಳಗ್ಗೆ ಶಾಲೆ, ಕಾಲೇಜು, ಕೆಲಸಗಳಿಗೆ ತೆರಳುವವರು ಪರದಾಡುವ ಸ್ಥಿತಿಯಾಗಿದೆ. ಸಹಸ್ರಾರು ವಾಹನಗಳು ಓಡಾಡುವ ಸೇತುವೆಯಲ್ಲಿ ಹಗಲಿನ ವೇಳೆ ದುರಸ್ತಿ ಕಾಮಗಾರಿ ನಡೆಸುವುದು ಎಷ್ಟು ಸರಿ ಎಂದು ಟ್ರಾಫಿಕ್ ಜಾಮಲ್ಲಿ ಸಿಲುಕಿದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.






ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೆಳಗ್ಗಿನಿಂದ ರಾತ್ರಿ ವರೆಗೂ ಸೇತುವೆಯಲ್ಲಿ ಮೊಕ್ಕಾಂ ಹೂಡಿದ್ದು ಸುಗಮ ಸಂಚಾರಕ್ಕೆ ಹರಸಾಹಸ ಪಟ್ಟಿದ್ದಾರೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ತುರ್ತು ವಾಹನಗಳು ಕಲ್ಲಾಪುವಿನಿಂದ ವಿರುದ್ಧ ದಿಕ್ಕಿನ ರಸ್ತೆಯಿಂದ ಅಪಾಯಗಳನ್ನ ಲೆಕ್ಕಿಸದೆ ಸಾಗಿವೆ. ಕೆಲವು ದ್ವಿಚಕ್ರ ವಾಹನ ಸವಾರರು ಕೂಡ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದಾರೆ. ನಿರಂತರ ಟ್ರಾಫಿಕ್ ಜಾಮ್ ನಿಂದ ಎಚ್ಚೆತ್ತ ಸಂಚಾರಿ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಖುದ್ದಾಗಿ ಕಲ್ಲಾಪು ಹೆದ್ದಾರಿಯಲ್ಲಿ ಸಂಚಾರ ನಿಯಂತ್ರಣಕ್ಕೆ ಮುಂದಾಗಿದ್ದಾರೆ.
ಕಲ್ಲಾಪಿನಿಂದ ಮಂಗಳೂರಿಗೆ ತೆರಳಲು ಎರಡು ಬದಿಯ ಹೆದ್ದಾರಿ ರಸ್ತೆಯಿಂದಲೂ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ತೆರಳುವ ಸರಕು ಘನ ವಾಹನಗಳನ್ನ ಮಾತ್ರ ಹಳೆಯ ಸೇತುವೆಯ ಮೇಲಿಂದ ಬಿಡಲಾಗಿದೆ. ಒಟ್ಟು ನಾಲ್ಕು ದಿವಸ ಕಾಲ ಸೇತುವೆಯ ಕಾಮಗಾರಿ ನಡೆಯಲಿದ್ದು, ಪೂರ್ವ ಸಿದ್ಧತೆ ಇಲ್ಲದೆ ಕಾಮಗಾರಿ ನಡೆಸಿದ್ದರಿಂದ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.
"There is a huge traffic blockage on the Ullal Bridge road due to tar fixing. The old road was in poor condition, with exposed iron rods that caused tire blowouts in cars. The roads have now been repaired, but this has resulted in significant traffic jams."
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm