ಬ್ರೇಕಿಂಗ್ ನ್ಯೂಸ್
20-12-24 09:28 pm Mangalore Correspondent ಕರಾವಳಿ
ಮಂಗಳೂರು, ಡಿ.20: ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮಲ್ಲಿಕಟ್ಟೆಯ ಸರ್ಕಲ್ ಬಳಿ ಸೇರಿದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಲೇ ಕೆಲಹೊತ್ತು ಪ್ರತಿಭಟನೆ ನಡೆಸಿದ್ದಾರೆ. ಅಷ್ಟರಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಸುತ್ತುವರಿದಿದ್ದಾರೆ. ಆದರೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯತ್ತ ರಸ್ತೆಯಲ್ಲಿ ನುಗ್ಗಿ ಬಂದಿದ್ದಾರೆ. ಈ ವೇಳೆ, ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.
ಪೊಲೀಸರು ಬಲವಂತವಾಗಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಬಸ್ಸಿನೊಳಗೆ ತಳ್ಳಿದ್ದಾರೆ. ಈ ವೇಳೆ, ಕೆಲವು ಮಹಿಳಾ ಕಾರ್ಯಕರ್ತರು ಹೊರಳಾಡಲು ಯತ್ನಿಸಿದ್ದೂ ನಡೆಯಿತು. ಅವರನ್ನೂ ಮಹಿಳಾ ಪೇದೆಯರು ಎತ್ತಿ ಜೀಪಿನೊಳಕ್ಕೆ ತಳ್ಳಿದ್ದಾರೆ. ಆನಂತರ, ಶಾಸಕ ವೇದವ್ಯಾಸ ಕಾಮತ್ ಅವರನ್ನೂ ಜೀಪಿನಲ್ಲಿ ಕುಳ್ಳಿರಿಸಿ ವಶಕ್ಕೆ ಪಡೆದಿದ್ದಾರೆ. 50 ಮಂದಿಯಷ್ಟು ಬಿಜೆಪಿ ಕಾರ್ಯಕರ್ತರಿದ್ದರೆ, ನೂರಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿತ್ತು.
BJP members and leaders protest gherao congress office in Mangalore over arrest of CT Ravi. MLA Vedavyas and many members of BJP were taken to police custody.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm