ಬ್ರೇಕಿಂಗ್ ನ್ಯೂಸ್
22-12-24 11:03 pm Mangalore Correspondent ಕರಾವಳಿ
ಮಂಗಳೂರು, ಡಿ.22: ತಾನು ಲೋಕಾಯುಕ್ತ ಅಧಿಕಾರಿಯೆಂದು ಹೇಳಿ ಫೋನ್ ಮಾಡಿ, ಪ್ರಕರಣವನ್ನು ಹಣ ಕೊಟ್ಟರೆ ಮುಗಿಸುತ್ತೇನೆಂದು ನಂಬಿಸಿ ಹಣ ಪೀಕಿಸಲು ಯತ್ನಿಸಿದ ಘಟನೆ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆಯ ರೆವಿನ್ಯೂ ಅಧಿಕಾರಿ ಪುರುಷೋತ್ತಮ ಎಂಬವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತಾನು ಮಂಗಳೂರು ಲೋಕಾಯುಕ್ತ ಇಲಾಖೆಯ ಅಧಿಕಾರಿ ಪ್ರಭಾಕರ ಎಂದು ಪರಿಚಯಿಸಿದ್ದ. ನಿಮ್ಮ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದು ಟೆಕ್ನಿಕಲ್ ಟೀಮ್ ಬರುವ ಮೊದಲು ಮಾತನಾಡಿ ಮುಗಿಸಿ ಬಿಡುವುದಾದರೆ ಮಾತುಕತೆ ಮಾಡಿ ಎಂದು ಹೇಳಿದ್ದ. ಪುರುಷೋತ್ತಮ ಅವರು ಮಂಗಳೂರು ಲೋಕಾಯುಕ್ತದಲ್ಲಿ ವಿಚಾರಿಸಿದಾಗ ಪ್ರಭಾಕರ ಎಂಬ ವ್ಯಕ್ತಿ ಇಲ್ಲವೆಂದು ತಿಳಿದುಬಂದಿತ್ತು. ಟ್ರು ಕಾಲರ್ ನಲ್ಲಿ ಪ್ರಭಾಕರ, ಲೋಕಾಯುಕ್ತ ಪಿಐ ಎಂದು ತೋರಿಸಿತ್ತು.
ಪುರಸಭೆಯಲ್ಲಿ ಆರೋಗ್ಯ ಇಲಾಖೆಯ ಇತರ ಅಧಿಕಾರಿಗಳಾದ ಲಿಲ್ಲಿ ನಾಯರ್ ಮತ್ತು ಕೃಷ್ಣ ಅವರಿಗು ಇದೇ ರೀತಿ ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಅನುಮಾನಗೊಂಡ ಪುರುಷೋತ್ತಮ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ನಡೆಸಿದ್ದರು. ಇದೀಗ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಿವಾಸಿ ಧನಂಜಯ ರೆಡ್ಡಿ ತೋಟಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇದೇ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಠಾಣೆ ಮತ್ತು ಹೈದರಾಬಾದ್ ನಗರದ ಶಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ಕೀಳಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎಸಿಪಿ ಧನ್ಯ ನಾಯಕ್ ಸೂಚನೆಯಂತೆ ಉಳ್ಳಾಲ ಪಿಎಸ್ಐ ಸಂತೋಷ್ ಕುಮಾರ್ ಮತ್ತು ಸಿಬಂದಿ ತಾಂತ್ರಿಕ ಸಾಕ್ಷ್ಯದಿಂದ ಆರೋಪಿಯನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.
Mangalore Andhra native arrested by ullal police after posing as Lokayukta officer. The arrested has been identified as Dhananajaya Reddy.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm