ಬ್ರೇಕಿಂಗ್ ನ್ಯೂಸ್
22-12-24 11:03 pm Mangalore Correspondent ಕರಾವಳಿ
ಮಂಗಳೂರು, ಡಿ.22: ತಾನು ಲೋಕಾಯುಕ್ತ ಅಧಿಕಾರಿಯೆಂದು ಹೇಳಿ ಫೋನ್ ಮಾಡಿ, ಪ್ರಕರಣವನ್ನು ಹಣ ಕೊಟ್ಟರೆ ಮುಗಿಸುತ್ತೇನೆಂದು ನಂಬಿಸಿ ಹಣ ಪೀಕಿಸಲು ಯತ್ನಿಸಿದ ಘಟನೆ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆಯ ರೆವಿನ್ಯೂ ಅಧಿಕಾರಿ ಪುರುಷೋತ್ತಮ ಎಂಬವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತಾನು ಮಂಗಳೂರು ಲೋಕಾಯುಕ್ತ ಇಲಾಖೆಯ ಅಧಿಕಾರಿ ಪ್ರಭಾಕರ ಎಂದು ಪರಿಚಯಿಸಿದ್ದ. ನಿಮ್ಮ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದು ಟೆಕ್ನಿಕಲ್ ಟೀಮ್ ಬರುವ ಮೊದಲು ಮಾತನಾಡಿ ಮುಗಿಸಿ ಬಿಡುವುದಾದರೆ ಮಾತುಕತೆ ಮಾಡಿ ಎಂದು ಹೇಳಿದ್ದ. ಪುರುಷೋತ್ತಮ ಅವರು ಮಂಗಳೂರು ಲೋಕಾಯುಕ್ತದಲ್ಲಿ ವಿಚಾರಿಸಿದಾಗ ಪ್ರಭಾಕರ ಎಂಬ ವ್ಯಕ್ತಿ ಇಲ್ಲವೆಂದು ತಿಳಿದುಬಂದಿತ್ತು. ಟ್ರು ಕಾಲರ್ ನಲ್ಲಿ ಪ್ರಭಾಕರ, ಲೋಕಾಯುಕ್ತ ಪಿಐ ಎಂದು ತೋರಿಸಿತ್ತು.
ಪುರಸಭೆಯಲ್ಲಿ ಆರೋಗ್ಯ ಇಲಾಖೆಯ ಇತರ ಅಧಿಕಾರಿಗಳಾದ ಲಿಲ್ಲಿ ನಾಯರ್ ಮತ್ತು ಕೃಷ್ಣ ಅವರಿಗು ಇದೇ ರೀತಿ ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಅನುಮಾನಗೊಂಡ ಪುರುಷೋತ್ತಮ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ನಡೆಸಿದ್ದರು. ಇದೀಗ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಿವಾಸಿ ಧನಂಜಯ ರೆಡ್ಡಿ ತೋಟಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇದೇ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಠಾಣೆ ಮತ್ತು ಹೈದರಾಬಾದ್ ನಗರದ ಶಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ಕೀಳಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎಸಿಪಿ ಧನ್ಯ ನಾಯಕ್ ಸೂಚನೆಯಂತೆ ಉಳ್ಳಾಲ ಪಿಎಸ್ಐ ಸಂತೋಷ್ ಕುಮಾರ್ ಮತ್ತು ಸಿಬಂದಿ ತಾಂತ್ರಿಕ ಸಾಕ್ಷ್ಯದಿಂದ ಆರೋಪಿಯನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.
Mangalore Andhra native arrested by ullal police after posing as Lokayukta officer. The arrested has been identified as Dhananajaya Reddy.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm