ಬ್ರೇಕಿಂಗ್ ನ್ಯೂಸ್
25-12-24 05:24 pm Mangalore Correspondent ಕರಾವಳಿ
ಮಂಗಳೂರು, ಡಿ.25: ಕೊಂಕಣ ರೈಲ್ವೇಯನ್ನು ಯಾವುದೇ ಷರತ್ತಿಲ್ಲದೆ ರಾಜ್ಯ ಸರಕಾರ ಬಿಟ್ಟುಕೊಟ್ಟರೆ ಭಾರತೀಯ ರೈಲ್ವೇ ಜೊತೆಗೆ ವಿಲೀನಕ್ಕೆ ಸಿದ್ಧ ಎಂದು ರೈಲ್ವೇ ಸಚಿವರು ಭರವಸೆ ನೀಡಿದ್ದಾರೆ. ಈಗಾಗಲೇ ಸಾಲದಲ್ಲಿ ಮುಳುಗಿರುವ ಕೊಂಕಣ ರೈಲ್ವೇಯನ್ನು ಕೇಂದ್ರ ರೈಲ್ವೇ ಇಲಾಖೆ ಜೊತೆಗೆ ವಿಲೀನಗೊಳಿಸಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಇಂಡಿಯನ್ ರೈಲ್ವೇ ಶೇ.51 ಮತ್ತು ರಾಜ್ಯ ಸರಕಾರ ಶೇ. 49 ಷೇರು ಬಂಡವಾಳದೊಂದಿಗೆ ಕೊಂಕಣ ರೈಲ್ವೇ ಆರಂಭಗೊಂಡಿತ್ತು. ರಾಜ್ಯ ಸರಕಾರ ಷೇರುಗಳನ್ನು ಬಿಟ್ಟುಕೊಟ್ಟರೆ ಭಾರತೀಯ ರೈಲ್ವೇ ಜೊತೆಗೆ ವಿಲೀನಕ್ಕೆ ಕೇಂದ್ರ ಸರಕಾರ ಸಿದ್ಧವಿದೆ ಸಂಸತ್ತಿನಲ್ಲಿ ರೈಲ್ವೇ ಸಚಿವರು ಉತ್ತರ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರಕಾರ ಷೇರಿನ ಪೂರಕ ಹಣವನ್ನು ನೀಡಿದರೆ ಕೇಂದ್ರಕ್ಕೆ ಬಿಟ್ಟುಕೊಡುವುದಾಗಿ ಹೇಳಿದೆ. ಈ ಯೋಜನೆಯಾಗಿ 25 ವರ್ಷ ಪೂರ್ಣಗೊಂಡಿದ್ದು ರಾಜ್ಯಕ್ಕೆ ಅನುಕೂಲವಾಗಿದೆ. ಆದರೆ, ಕೊಂಕಣ ರೈಲ್ವೇ ನಿಗಮ ಭಾರೀ ನಷ್ಟದಲ್ಲಿದ್ದು ರಾಜ್ಯ ಸರಕಾರ ತನ್ನ ಷೇರು ಬಿಟ್ಟುಕೊಟ್ಟು ವಿಲೀನಕ್ಕೆ ಸಹಕರಿಸಬೇಕು ಎಂದು ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕುರಿತಾಗಿ 19 ಪ್ರಶ್ನೆಗಳನ್ನು ಕೇಳಿದ್ದು, ಉತ್ತರ ಪಡೆದಿದ್ದೇನೆ. ಮುಂದೆ ಪ್ರತಿ ಬಾರಿ ಅಧಿವೇಶನ ಆದಾಗಲೂ ನಾನೇನು ಮಾಡಿದ್ದೇನೆ ಎಂಬುದನ್ನು ಜನರಿಗೆ ತಿಳಿಸಲು ಸಂವಾದ ಏರ್ಪಡಿಸುತ್ತೇನೆ ಎಂದು ಹೇಳಿದ ಚೌಟ, ಮಂಗಳೂರು- ಬೆಂಗಳೂರು ನಡುವಿನ ಬಿಸಿ ರೋಡ್ – ಗುಂಡ್ಯ ಚತುಷ್ಪಥ ಹೆದ್ದಾರಿ ಕಾಮಗಾರಿ 2025ರ ಜೂನ್ ನಲ್ಲಿ ಪೂರ್ಣಗೊಳಿಸುವುದಾಗಿ ಕೇಂದ್ರ ಸಾರಿಗೆ ಸಚಿವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಎಂದರು.
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ಧಿ ಕುರಿತು ಪ್ರಶ್ನೆ ಕೇಳಿದ್ದು, ಈ ನಿಟ್ಟಿನಲ್ಲಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸಚಿವರು ಸೂಚಿಸಿದ್ದಾರೆ. ಸಾಧ್ಯತಾ ವರದಿ ಆಧರಿಸಿ ಯೋಜನೆ ಅನುಷ್ಠಾನ ಆಗಲಿದೆ. ಪಶ್ಚಿಮ ಘಟ್ಟದಲ್ಲಿ ಇನ್ನೊಂದು ಹೆದ್ದಾರಿ ನಿರ್ಮಾಣಕ್ಕೆ ರಾಜ್ಯದ ಒಪ್ಪಿಗೆ ದೊರೆತರೆ ಮುಂದಿನ ಪ್ರಕ್ರಿಯೆ ನಡೆಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಮಂಗಳೂರಿನಲ್ಲಿ ಕೋಸ್ಟ್ ಗಾರ್ಡ್ ಅಕಾಡೆಮಿ, ಪ್ರೀಮಿಯರ್ ಬ್ಯಾಂಕಿಂಗ್ ಸಂಸ್ಥೆ, ಅಡಕೆ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ಕುರಿತಂತೆ ಸರಕಾರಿ- ಖಾಸಗಿ ಜಂಟಿ ಅಧ್ಯಯನ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರ ಜೊತೆಗೆ ಮಾತುಕತೆ ನಡೆಸಲಾಗಿದೆ. ಅಡಕೆ ರೋಗ ಬಾಧಿತ ಪ್ರದೇಶದಲ್ಲಿ ಪರ್ಯಾಯ ಬೆಳೆಯಾಗಿ ಕಾಫಿ ಬೆಳೆಯಬಹುದು ಎಂದು ಅಧ್ಯಯನ ವರದಿ ಬಂದಿದೆ ಎಂದು ಹೇಳಿದರು.
ಮಂಗಳೂರು- ಬೆಂಗಳೂರು ಮಧ್ಯೆ ಹೈಟೆಕ್ ರೈಲ್ವೇ ಲೈನ್ ಕುರಿತು ಕೇಳಿದ ಪ್ರಶ್ನೆಗೆ, ಕೇಂದ್ರ ಸರಕಾರ ಇದರ ಅಗತ್ಯದ ಬಗ್ಗೆ ಒಪ್ಪಿಕೊಂಡಿದೆ. ಸುಬ್ರಹ್ಮಣ್ಯ- ಸಕಲೇಶಪುರ ನಡುವೆ ರೈಲ್ವೇ ಲೈನ್ ಇಲೆಕ್ಟ್ರಿಫಿಕೇಶನ್ ಕೆಲಸ ಮುಂದಿನ ಜೂನ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಮಂಗಳೂರು ಜಂಕ್ಷನ್ ಮತ್ತು ಸೆಂಟ್ರಲ್ ರೈಲ್ವೇ ಸ್ಟೇಶನ್ ಸೇರಿದಂತೆ ಕರ್ನಾಟಕ ಭಾಗದ 36 ಕಿಮೀ ಹಳಿಯನ್ನು ನೈರುತ್ಯ ರೈಲ್ವೇಯಲ್ಲಿ ವಿಲೀನಗೊಳಿಸುವ ಉದ್ದೇಶದಿಂದ ಕೇಂದ್ರ ರೈಲ್ವೇ ಸಚಿವರ ಜೊತೆ ಮಾತುಕತೆ ನಡೆಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಚೌಟ ಹೇಳಿದರು.
Dakshina Kannada Member of Parliament Capt. Brijesh Chowta on Tuesday urged the Karnataka government to relinquish its share with the Konkan Railway Corporation Ltd. (KRCL) in favour of the Indian Railways (IR) to pave way for merging KRCL with the IR.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm