ಬ್ರೇಕಿಂಗ್ ನ್ಯೂಸ್
14-12-20 10:52 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ಸಂದರ್ಭಗಳಲ್ಲಿ ತುರ್ತು ಸೇವೆಗಾಗಿ ದೇಶದಾದ್ಯಂತ ಜಾರಿಗೊಳ್ಳುತ್ತಿರುವ 112 ತುರ್ತು ಸಹಾಯವಾಣಿ ಸೇವೆಗೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲೂ ಚಾಲನೆ ನೀಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೋಮವಾರ ತಮ್ಮ ಕಚೇರಿ ಎದುರು 112 ತುರ್ತು ಸೇವೆಗೆ ನಿಯೋಜನೆಗೊಂಡಿರುವ 19 ವಾಹನಗಳಿಗೆ ಹಸಿರು ನಿಶಾನೆ ನೀಡಿದರು.
ದೇಶದಲ್ಲಿ ಒಂದೇ ತುರ್ತು ಕರೆ ಸಂಖ್ಯೆ ‘112’ ಜಾರಿಗೊಳ್ಳುತ್ತಿದೆ. ಅದರಂತೆ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲೂ ಈ ಸೇವೆಗೆ ಚಾಲನೆ ನೀಡಲಾಗಿದೆ. ರವಿವಾರದಂದೇ ಸೇವೆ ಆರಂಭಗೊಂಡಿದ್ದು ಸೋಮವಾರ ಅಧಿಕೃತ ಚಾಲನೆ ನೀಡಲಾಗಿದೆ. ರವಿವಾರ ತುರ್ತು ಸೇವೆಗೆ 24 ಕರೆಗಳು ಬಂದಿದ್ದು ತುರ್ತಾಗಿ ಸ್ಪಂದಿಸಲಾಗಿದೆ ಎಂದು ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.

ತುರ್ತು ಸಂದರ್ಭಗಳಿಗೆ 100ಗೆ ಕರೆ ಮಾಡಿದರೆ ಸೇವೆ ದೊರೆಯುತ್ತಿತ್ತು. ಮುಂದೆ 112ಗೆ ಕರೆ ಮಾಡಿದರೆ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ತುರ್ತು ಸೇವೆಗಳು ದೊರೆಯಲಿವೆ. 100ಕ್ಕೆ ಕರೆ ಮಾಡಿದರೂ ಇದು 112 ಸಂಖ್ಯೆಗೆ ಸಂಪರ್ಕಗೊಂಡು ಸೇವೆ ದೊರೆಯುತ್ತದೆ ಎಂದರು.
ಅತ್ಯಂತ ಕಡಿಮೆ ಅವಧಿಯಲ್ಲಿ ಸೇವೆ ಒದಗಿಸುವುದು ಇದರ ಉದ್ದೇಶ. ತುರ್ತು ಸಂದರ್ಭದಲ್ಲಿ ಕರೆ ಮಾಡಿದಾಗ ಬೆಂಗಳೂರಿನಲ್ಲಿರುವ ನಿಯಂತ್ರಣ ಕೊಠಡಿಗೆ ಮಾಹಿತಿ ಹೋಗಿ ಅಲ್ಲಿಂದ ಜಿಪಿಎಸ್ ಆಧಾರದಲ್ಲಿ ಸಹಾಯ ಬೇಕಿರುವ ಪ್ರದೇಶದಲ್ಲಿರುವ ಸಹಾಯವಾಣಿ ವಾಹನ/ ಪೊಲೀಸ್ ತಂಡಕ್ಕೆ ತಕ್ಷಣ ಮಾಹಿತಿ ರವಾನೆಯಾಗುತ್ತದೆ. ಅಗ್ನಿಶಾಮಕ ಮತ್ತಿತರ ವಿಪತ್ತು ನಿರ್ವಹಣಾ ತಂಡಗಳಿಗೆ ಸಂಬಂಧಿಸಿದ ಮಾಹಿತಿ ಕೂಡ ಕೂಡಲೇ ಆಯಾ ವಿಭಾಗಗಳಿಗೆ ಹೋಗುತ್ತದೆ. ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ರವಾನೆಯಾಗುತ್ತದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ತುರ್ತು ಸೇವೆಯು ದಿನದ 24 ಗಂಟೆಯೂ ದೊರೆಯಲಿದ್ದು, ಸಿಬ್ಬಂದಿ ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ಗರಿಷ್ಠ 15ರಿಂದ 30 ನಿಮಿಷಗಳೊಳಗೆ ಸೇವೆ ಒದಗಿಸುವುದು ಇದರ ಉದ್ದೇಶ. ಸ್ಥಳ ಸಮೀಪದಲ್ಲಿದ್ದರೆ ಹೆಚ್ಚು ಬೇಗನೆ ಸೇವೆ ದೊರೆಯಲಿದೆ ಎಂದು ವಿಕಾಸ್ ಕುಮಾರ್ ತಿಳಿಸಿದರು.
ತುರ್ತು ಸೇವೆಗೆ ನಿಯೋಜನೆಗೊಂಡ 19 ವಾಹನಗಳು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರ್ಯಾಲಿ ನಡೆಸಿದವು. ಡಿಸಿಪಿಗಳಾದ ವಿನಯ ಗಾಂವ್ಕರ್, ಹರಿರಾಮ್ ಶಂಕರ್, ಸಂಚಾರ ವಿಭಾಗದ ಎಸಿಪಿಗಳಾದ ಎಂ.ಎ. ನಟರಾಜ್ ಉಪಾಸೆ, ಇನ್ಸ್ಪೆಕ್ಟರ್ ರಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
Mangaluru city police commissioner Vikash Kumar Vikash on Monday, December 14 launched single emergency helpline number '112' under the Emergency Response Support System.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm