ಬ್ರೇಕಿಂಗ್ ನ್ಯೂಸ್
            
                        25-12-24 10:55 pm Mangalore Correspondent ಕರಾವಳಿ
            ಮಂಗಳೂರು, ಡಿ.25: ಇಸ್ರೇಲ್ ಮೂಲದ ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಡಿಜೆ ಪ್ಲೇಯರ್ ಸಜಂಕಾ ಮಂಗಳೂರಿಗೆ ಬರಲಿದ್ದು, ಹೊಸ ವರ್ಷದ ಪ್ರಯುಕ್ತ ಡಿ.27ರಂದು ಬೋಳಾರದ ಸಿಟಿ ಬೀಚ್ ನಲ್ಲಿ ಡಿಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆದರೆ ಈ ಕಾರ್ಯಕ್ರಮಕ್ಕೆ ವಿಎಚ್ ಪಿ, ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು ಇಸ್ರೇಲಿ ವ್ಯಕ್ತಿಯ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಪೊಲೀಸರಿಗೆ ದೂರು ನೀಡಿದೆ.
ಸಜಂಕಾ (ಮೂಲ ಹೆಸರು ಅವಿಶೈ ಗ್ರಿನ್ ಬಾಮ್) ಭಾರತದಲ್ಲಿ ಈ ಬಾರಿ ಹಲವು ಕಡೆ ನ್ಯೂ ಇಯರ್ ಪಾರ್ಟಿಗಳಲ್ಲಿ ಭಾಗವಹಿಸಲಿದ್ದಾರೆ. ಯುವ ಗಾಯಕ ಮತ್ತು ಡಿಜೆ ಪಾರ್ಟಿ ಮ್ಯುಜೀಶಿಯನ್ ಆಗಿರುವ ಸಜಂಕಾ ವಿಭಿನ್ನ ಶೈಲಿಯ ಮ್ಯೂಸಿಕ್ ನೀಡುವುದರಲ್ಲಿ ಫೇಮಸ್ ಆಗಿದ್ದಾರೆ. ಭಾರತೀಯ ಶೈಲಿಯ ಪ್ರಸಿದ್ಧ ಹಾಡುಗಳಿಗೂ ಪಾಪ್ ಮಾದರಿಯಲ್ಲಿ ಸಂಗೀತ ಸಂಯೋಜಿಸಿ ಹಾಡಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿದ್ದು ಯುವಕರನ್ನು ಆಕರ್ಷಿಸಿದೆ.
ಇದೇ ಕಾರಣಕ್ಕೆ ಮಂಗಳೂರಿನ ಟಾಪ್ ಹೌಸ್ ರೆಸ್ಟೋರೆಂಟ್ ಮಾಲೀಕರು ಸಜಂಕಾ ಅವರನ್ನು ಮೊದಲ ಬಾರಿಗೆ ಇಲ್ಲಿಗೆ ಕರೆಸುತ್ತಿದ್ದು, ಸಿಟಿ ಬೀಚ್ ನಲ್ಲಿ ಭಾರೀ ವೆಚ್ಚದಲ್ಲಿ ಡಿಜೆ ಪಾರ್ಟಿ ಆಯೋಜಿಸಿದ್ದಾರೆ. ಇದಕ್ಕಾಗಿ ದುಬಾರಿ ಟಿಕೆಟ್ ಅನ್ನೂ ನೀಡುತ್ತಿದ್ದು, ಜಾಲತಾಣದಲ್ಲಿ ಬುಕ್ಕಿಂಗ್ ಆರಂಭಗೊಂಡಿದೆ. ಇದೇ ವೇಳೆ, ಸಜಂಕಾ ಡಿಜೆ ಪಾರ್ಟಿಗೆ ಬಜರಂಗದಳ ಯುವಕರು ವಿರೋಧ ವ್ಯಕ್ತಪಡಿಸಿದ್ದು, ಆತ ಭಾರತೀಯ ದೇವರುಗಳ ಬಗ್ಗೆ, ದೇವರ ಹಾಡುಗಳ ಬಗ್ಗೆ ವಿಚಿತ್ರವಾಗಿ ವಿಡಂಬಿಸಿದ್ದಾನೆ. ಆ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾನೆ. ಇಂಥ ವ್ಯಕ್ತಿಯ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಬಜರಂಗದಳ ಪ್ರಮುಖರು ಮಂಗಳೂರು ಸೆಂಟ್ರಲ್ ಎಸಿಪಿಗೆ ದೂರು ನೀಡಿ ಒತ್ತಾಯಿಸಿದ್ದಾರೆ.
            
            
            Israel-based DJ artist Sajanka is in Mangalore for a New Year party. Bajrang Dal members and leaders have issued a letter to the police requesting the cancellation of the program, which is scheduled to be held at Beach House in Bolar on December 27th.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm