ಬ್ರೇಕಿಂಗ್ ನ್ಯೂಸ್
26-12-24 07:07 pm Udupi Correspondent ಕರಾವಳಿ
ಉಡುಪಿ, ಡಿ.26: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿರುವ ಯೋಧ ಅನೂಪ್ ಪೂಜಾರಿ ಅವರಿಗೆ ಹುಟ್ಟೂರು ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು. ಸೇನಾ ವಿಮಾನದಲ್ಲಿ ನಿನ್ನೆ ಮಂಗಳೂರು ಏರ್ಪೋರ್ಟ್ ಬಂದಿದ್ದ ಪಾರ್ಥಿವ ಶರೀರವನ್ನು ನಸುಕಿನಲ್ಲಿ ಕುಂದಾಪುರಕ್ಕೆ ಒಯ್ಯಲಾಗಿತ್ತು. ಬೆಳಗ್ಗೆ 9 ಗಂಟೆಗೆ ತೆಕ್ಕಟ್ಟೆಯಿಂದ ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ, ಹುಟ್ಟೂರು ಬೀಜಾಡಿಗೆ ತರಲಾಗಿತ್ತು.
ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆದಿದ್ದು ಅಲ್ಲಿ ಕುಟುಂಬದ ಆಪ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ ಅವರು ಕಲಿತ ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನೂಪ್ ಪೂಜಾರಿ ಆಪ್ತರು, ಸಾರ್ವಜನಿಕರು, ಶಾಲಾ ಮಕ್ಕಳು, ಅಧಿಕಾರಿಗಳು, ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಿದರು. ಅನೂಪ್ ಅವರ ಅಂತಿಮ ದರ್ಶನಕ್ಕಾಗಿ ಸಾವಿರಾರು ಮಂದಿ ಬೀಜಾಡಿಯಲ್ಲಿ ಸೇರಿದ್ದರು. ಮೃತದೇಹವನ್ನು ಮನೆಗೆ ತಂದಾಗ ಬಂಧುಗಳ ರೋದನ ಮುಗಿಲು ಮುಟ್ಟಿತ್ತು.





ಸೇರಿದ್ದ ಜನರು ಭಾರತ್ ಮಾತಾ ಕಿ ಜೈ, ಅನೂಪ್ ಪೂಜಾರಿ ಅಮರ್ ರಹೇ ಘೋಷಣೆಗಳನ್ನು ಕೂಗಿದರು. ಅಗಲಿದ ಯೋಧನಿಗೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವ ಸಲ್ಲಿಸಲಾಯಿತು. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಅನೂಪ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿತ್ತು. ಪತ್ನಿ ಮಂಜುಶ್ರೀಗೆ ಸೇನೆಯ ಹಿರಿಯ ಅಧಿಕಾರಿಗಳು ತ್ರಿವರ್ಣ ದ್ವಜ ಹಸ್ತಾಂತರಿಸಿದರು. ಮಧ್ಯಾಹ್ನ ವೇಳೆಗೆ ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅವರ ಅಂತ್ಯಸಂಸ್ಕಾರ ನಡೆಯಿತು.
ಅನೂಪ್ ಪಾರ್ಥಿವ ಶರೀರಕ್ಕೆ ಅವರ ಸಹೋದರ ಅಗ್ನಿ ಸ್ಪರ್ಶ ಮಾಡಿದರು. ಅಂತಿಮ ವಿಧಿ-ವಿಧಾನದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್ ಗಂಟೆಹೊಳೆ ಸೇರಿದಂತೆ ಜಿಲ್ಲಾಡಳಿತದ ಸಿಬಂದಿ, ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳು, ಸೇನಾ ಸಿಬ್ಬಂದಿ ಭಾಗಿಯಾಗಿದ್ದರು.
Lance Havaldar Anoop Poojary, who tragically died in an army vehicle accident in Poonch, Jammu and Kashmir, was laid to rest with full honours in his hometown of Beejady, Udupi district, on Thursday.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm