ಬ್ರೇಕಿಂಗ್ ನ್ಯೂಸ್
27-12-24 09:26 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕ್ರೈಸ್ತ ಸಮುದಾಯದ 155 ಮಂದಿ ತಮ್ಮ ಹೆಸರು, ಮೊಬೈಲ್ ಸಂಖ್ಯೆ ಮತ್ತು ಸಹಿಯನ್ನು ಹಾಕಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಮನವಿ ನೀಡಿದ್ದಾರೆ. ಅನಿಲ್ ಲೋಬೊ ಹಲವರಿಗೆ ಅನ್ಯಾಯ ಮಾಡಿದ್ದಾರೆ. ಮುಗ್ಧ ಮನೋಹರ್ ಪಿರೇರಾ ಸಾವಿಗೆ ನ್ಯಾಯ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದು ಇದರ ಪ್ರತಿಯನ್ನು ಮುಖ್ಯಮಂತ್ರಿ, ಗೃಹ ಸಚಿವರು, ಸಹಕಾರಿ ಸಚಿವರು, ಜಿಲ್ಲಾಧಿಕಾರಿ ಮತ್ತು ಸ್ಪೀಕರ್ ಯುಟಿ ಖಾದರ್ ಗೂ ರವಾನಿಸಿದ್ದಾರೆ.
ಇದೇ ವೇಳೆ, ಘಟನೆ ಬಗ್ಗೆ ಪಾರದರ್ಶಕ ತನಿಖೆಯಾಗಿಸುವ ನಿಟ್ಟಿನಲ್ಲಿ ಪೊಲೀಸ್ ಕಮಿಷನರ್ ಪ್ರಕರಣದ ತನಿಖಾಧಿಕಾರಿಯಾಗಿ ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಅವರನ್ನು ನೇಮಿಸಿದ್ದಾರೆ. ಪ್ರಕರಣ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದರೂ, ಅದರ ತನಿಖೆಯನ್ನು ನಗರ ಠಾಣೆಯ ಇನ್ಸ್ ಪೆಕ್ಟರ್ ಗೆ ವರ್ಗಾಯಿಸಿದ್ದಾರೆ. ನಾಗರಾಜ್ ಅವರು ಅಪರಾಧ ತನಿಖೆಯಲ್ಲಿ ಪಳಗಿದ ಕೈಯಾಗಿದ್ದು, ಪ್ರಕರಣದ ತನಿಖೆ ಶುರು ಮಾಡಿದ್ದಾರೆ.
ಇತ್ತ ದಕ್ಷಿಣ ಕನ್ನಡ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಡಿ.27ರ ಶುಕ್ರವಾರ ನಿಗದಿಯಾಗಿದ್ದ ಜಾಮೀನು ಅರ್ಜಿ ಸರ್ಕಾರಿ ರಜೆ ಘೋಷಣೆಯಾದ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಿಕೆಯಾಗಿದ್ದು, ಡಿ.30ರಂದು ವಿಚಾರಣೆಗೆ ಬರಲಿದೆ. ಸದ್ಯ ಜೈಲು ಪಾಲಾಗಿದ್ದರೂ ಖಾಸಗಿ ಆಸ್ಪತ್ರೆಯಲ್ಲಿರುವ ಅನಿಲ್ ಲೋಬೊಗೆ ಸರ್ಜರಿ ಅಗತ್ಯವಿದೆಯೆಂದು ಮತ್ತೊಂದು ಅರ್ಜಿ ಕೋರ್ಟಿಗೆ ಸಲ್ಲಿಕೆಯಾಗಿದೆ. ಡಿ.26ರಂದು ಸರ್ಜರಿ ಕುರಿತ ಅರ್ಜಿ ವಿಚಾರಣೆಗೆ ಬಂದಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಿಸಿದ್ದಾರೆ.
ಜಿಲ್ಲಾ ಸರ್ಜನ್ ಹೊರತುಪಡಿಸಿ ಖಾಸಗಿ ವೈದ್ಯರ ಶಿಫಾರಸನ್ನು ಪರಿಗಣಿಸಬಾರದೆಂದು ಆಕ್ಷೇಪ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಈ ಬಗ್ಗೆ ಉಲ್ಲೇಖಿತ ಆದೇಶವಿದ್ದರೆ ಹಾಜರುಪಡಿಸುವಂತೆ ತಿಳಿಸಿದ್ದು, ಸರ್ಕಾರಿ ವಕೀಲರು ಸಮಯಾವಕಾಶ ಕೇಳಿದ್ದಾರೆ. ಈ ಕುರಿತಾಗಿಯೂ ಮುಂದಿನ ವಿಚಾರಣೆಯನ್ನು ಡಿ.30ಕ್ಕೆ ಮುಂದೂಡಲಾಗಿದೆ. ಇದೇ ವೇಳೆ, ಮನೋಹರ್ ಪಿರೇರಾ ಸಾವಿನ ಬಗ್ಗೆ ಬ್ಯಾಂಕಿನ ಅಧಿಕಾರಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆಂದು ತಿಳಿದುಬಂದಿದೆ.
Mangalore MCC Bank Anil Lobo Arrest, Inspector TD Nagraj appointed as IO, Christan representatives have appeled the Police commissioner Anupam Agarwal for strict action against lobo. The Mangaluru City police has arrested the chairman of Mangalore Catholic Cooperative (MCC) Bank, Anil Lobo, for alleged abetment to suicide of one Manohar Pereira, 47, in Cutinho Padavu in Permanki village of the city on Tuesday.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm