ಬ್ರೇಕಿಂಗ್ ನ್ಯೂಸ್
27-12-24 11:02 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.



ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
Mangalore Daiva slams at Adminstration members for throwing waste during program at Kolya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm