ಬ್ರೇಕಿಂಗ್ ನ್ಯೂಸ್
            
                        27-12-24 11:02 pm Mangalore Correspondent ಕರಾವಳಿ
            ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.



ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
            
            
            Mangalore Daiva slams at Adminstration members for throwing waste during program at Kolya.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm