ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.




ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm