ಬ್ರೇಕಿಂಗ್ ನ್ಯೂಸ್
29-12-24 10:02 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರ ಪಾಲಾಗುತ್ತಿದ್ದ ಅಣ್ಣನ ಮಗಳನ್ನ ರಕ್ಷಿಸಿ ದಡಕ್ಕೆ ಕರೆತಂದ ವ್ಯಕ್ತಿಯೇ ರಕ್ಕಸ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದ ಪೆರಿಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರಿನ ಶಿವಾಜಿ ನಗರದ ಶಿವಾಜಿ ರೋಡ್ ನಿವಾಸಿ ಕೆ.ಎಂ. ಸಜ್ಜದ್ ಆಲಿ (45)ಮೃತ ವ್ಯಕ್ತಿ. ಸಜ್ಜದ್ ಅವರ ಅತ್ತಿಗೆ, ಮಕ್ಕಳು ಮತ್ತು ಸಹೋದರ ನಿನ್ನೆ ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಸಂಬಂಧಿಕರ ಮದುವೆ ಸಮಾರಂಭಕ್ಕೆ ಬಂದಿದ್ದರು. ಮದುವೆ ಮುಗಿಸಿ ಸಜ್ಜದ್ ಅವರ ಪತ್ನಿ ಅಲಿಮಾ ರಶೀದಾರವರ ಮಂಗಳೂರಿನ ಪಡೀಲಿನಲ್ಲಿರುವ ತಾಯಿ ಮನೆಯಲ್ಲಿ ರಾತ್ರಿ ಉಳಿದಿದ್ದರು. ಇಂದು ಬೆಂಗಳೂರಿನಿಂದ ಬಂದ ಸಜ್ಜದ್ ಆಲಿರವರು ಕುಟಂಬಸ್ಥರೊಂದಿಗೆ ಒಟ್ಟು 11 ಜನರು ಒಟ್ಟಾಗಿ ಮದ್ಯಾಹ್ನ ವೇಳೆಗೆ ಸೋಮೇಶ್ವರದ ಉಚ್ಚಿಲ ಪೆರಿಬೈಲು ಬೀಚಿಗೆ ಬಂದಿದ್ದರು.
ಬೀಚ್ ನಲ್ಲಿ ಕುಟುಂಬಸ್ಥರು ನೀರಾಟವಾಡುತ್ತಿದ್ದಾಗ ಸಜ್ಜದ್ ಅವರ ಅಣ್ಣನಾದ ದಿವಂಗತ ಸಾದಿಕ್ ಆಲಿಯವರ ಮಗಳು ಉಮೈ ಆಸಿಯಾ ಎಂಬಾಕೆ ಏಕಾಏಕಿ ಆಯತಪ್ಪಿ ಸಮುದ್ರದ ನೀರಿನ ಅಲೆಯಲ್ಲಿ ಕೊಚ್ಚಿಕೊಂಡು ಸ್ವಲ್ಪ ದೂರಕ್ಕೆ ಹೋಗಿದ್ದು ಪ್ರಾಣ ರಕ್ಷಣೆಗೆ ಬೊಬ್ಬಿಟ್ಟಿದ್ದಾಳೆ. ಕೂಡಲೇ ಸಜ್ಜದ್ ಅಲಿಯವರು ಸಮುದ್ರಕ್ಕೆ ಧುಮುಕಿ ಆಸಿಯಾಳನ್ನು ಎಳೆದು ತಂದು ದಡಕ್ಕೆ ಹಾಕಿದ್ದಾರೆ. ಅದೇ ಸಂದರ್ಭ ತೀರಕ್ಕೆ ಅಪ್ಪಳಿಸಿದ ದೈತ್ಯಾಕಾರದ ಮತ್ತೊಂದು ಅಲೆಯೊಂದು ಸಜ್ಜದ್ ಅವರನ್ನು
ಸಮುದ್ರದತ್ತ ಸೆಳೆದುಕೊಂಡಿದೆ. ಅದರ ಬೆನ್ನಲ್ಲೇ ಸಮುದ್ರದ ಅಲೆಯಲ್ಲಿ ಮತ್ತೆ ಸಜ್ಜದ್ ನೇರವಾಗಿ ತೀರಕ್ಕೆ ಬಂದು ಬಿದ್ದಿದ್ದಾರೆ. ಅಲೆಯಲ್ಲಿ ಅಪ್ಪಳಿಸಿದ ರೀತಿ ಬಿದ್ದಿದ್ದರಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನ ಕೂಡಲೇ ದೇರಳಕಟ್ಟೆ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತೆನ್ನಲಾಗಿದೆ. ಜೀವನ್ಮರಣ ಸ್ಥಿತಿಯಲ್ಲಿದ್ದ ಸಜ್ಜದ್ ಅವರನ್ನ ಆಸ್ಪತ್ರೆಗೆ ಒಯ್ಯುತ್ತಿದ್ದ ದಾರಿ ಮಧ್ಯದ ಸಂಕೊಲಿಗೆ ಎಂಬಲ್ಲಿ ರೈಲ್ವೇ ಗೇಟ್ ಹಾಕಿದ್ದ ಕಾರಣ ಆಸ್ಪತ್ರೆ ಸೇರಲು ವಿಳಂಬವಾಗಿದೆ ಎನ್ನಲಾಗಿದೆ.
ಮೃತ ಕೆ.ಎಂ. ಸಜ್ಜದ್ ಅವರು ಪುತ್ತೂರಿನ ಅಲಿಮಾ ರಶೀದಾರವರನ್ನು ಮದುವೆಯಾಗಿದ್ದು ದಂಪತಿಗೆ ಮೂರು ಜನ ಮಕ್ಕಳಿದ್ದಾರೆ. ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಕಳೆದ 4 ವರುಷದಿಂದ ಪುತ್ತೂರಿನ ಬಾಡಿಗೆ ಫ್ಲ್ಯಾಟ್ ಒಂದರಲ್ಲಿ ಸಜ್ಜದ್ ಕುಟುಂಬ ವಾಸ ಮಾಡಿಕೊಂಡಿತ್ತು. ಸಜ್ಜದ್ ಆಲಿಯವರು ರಿಯಲ್ ಎಸ್ಟೇಟ್ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿದ್ದು ವಾರಕ್ಕೊಮ್ಮೆ ಪುತ್ತೂರಿಗೆ ಬರುತ್ತಿದ್ದರು. ಮೃತ ಸಜ್ಜದ್ ಅವರ ತಮ್ಮ ಮಹಮ್ಮದ್ ಮುಜಮಿಲ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore 45 year old man from Bangalore drowned at Someshwara Beach trying to rescue brothers daughter. The deceased has been identified as Sajad Ali.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm