ಬ್ರೇಕಿಂಗ್ ನ್ಯೂಸ್
            
                        29-12-24 11:08 pm Mangalore Correspondent ಕರಾವಳಿ
            ಮಂಗಳೂರು, ಡಿ. 29: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಉಳಾಯಿಬೆಟ್ಟು ಗ್ರಾಮದ ಫೆರ್ಮಾಯ್ ಚರ್ಚ್ ಬಳಿಯ ನಿವಾಸಿ ಮನೋಹರ್ ಪಿರೇರಾ (47) ಅವರ ಮನೆಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಕುಟುಂಬಸ್ಥರ ಅಹವಾಲು ಆಲಿಸಿದ್ದಾರೆ.
ಮನೋಹರ್ ಪಿರೇರಾ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಾರಣ ಎಂದು ಹೇಳಿ ತಮ್ಮ ಕೊನೆಯ ವಾಟ್ಸಾಪ್ ವಿಡಿಯೋ ಮಾಡಿದ್ದರು. ತನ್ನ ಸಾಲವನ್ನು ಮರುಪಾವತಿಸಲು ನೀಡಿದ ಹಣವನ್ನು ಸಾಲಕ್ಕೆ ಜಮೆ ಮಾಡದೆ 9 ಲಕ್ಷ ರೂಪಾಯಿ ಯನ್ನು ಅನಿಲ್ ಲೋಬೊ ತಿಂದಿದ್ದಾನೆ ಎಂದು ಹೇಳಿದ್ದರು.



ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಪೊಲೀಸರು ಅನಿಲ್ ಲೋಬೊನನ್ನು ಬಂಧಿಸಿದ್ದರು. 
ಮನೋಹರ್ ಪಿರೇರಾ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಪರಿಸರದ ನೂರಾರು ಮಂದಿ ಸಹಿಯನ್ನೊಳಗೊಂಡ ಮನವಿಯನ್ನು ರಾಜ್ಯದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿಗಳು, ಗೃಹ ಸಚಿವರು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್  ರವರಿಗೆ ನೀಡಲಾಗಿತ್ತು. 
ಮನವಿಗೆ ಸ್ಪಂದಿಸಿದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾoತ್ವನ ಹೇಳಿದ್ದಾರೆ. ನಿಷ್ಪಕ್ಷ ತನಿಖೆಗೆ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿರುತ್ತಾರೆ. ಎಂಸಿ ಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊನಿಂದ ತೊಂದರೆಗೊಳಗಾದ ಇತರ ಗ್ರಾಹಕರು ಸ್ಥಳದಲ್ಲಿ ಹಾಜರಿದ್ದು ತಮ್ಮ ಅಳಲನ್ನು ಯು.ಟಿ. ಖಾದರ್ ಬಳಿ ತೋಡಿಕೊಂಡರು. ಸ್ಥಳೀಯರು ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ಬಳಿ ದಿವಂಗತ ಮನೋಹರ್ ಅವರ ಬದುಕಿನ ಕಷ್ಟಗಳನ್ನು ವಿವರಿಸಿದರು. ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.
            
            
            Mangalore Speaker UT Khader visits house of late Manohar Pereira Family in Anil Lobo MCC Bank suicide case offering his condolences and assuring them of an impartial investigation into the circumstances surrounding the tragedy. He also promised strict action against those found culpable.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm