ಬ್ರೇಕಿಂಗ್ ನ್ಯೂಸ್
01-01-25 10:40 am Mangalore Correspondent ಕರಾವಳಿ
ಉಳ್ಳಾಲ, ಜ 01: ಸಮುದ್ರ ತೀರದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಸ್ನೇಹಿತರಿಬ್ಬರು ಹರಟೆ ಹೊಡೆಯುತ್ತಿದ್ದು, ಈ ವೇಳೆ ಆಯತಪ್ಪಿ ಬಾವಿಯೊಳಗಡೆ ಬಿದ್ದ ಸ್ಥಳೀಯ ಮೀನುಗಾರರೋರ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ತಿಂಗಳ ಹಿಂದಷ್ಟೆ ಈಜು ಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ್ದ ಸೋಮೇಶ್ವರ ಉಚ್ಚಿಲದ ವಾಝ್ಕೊ ರೆಸಾರ್ಟ್ ಮುಂಭಾಗದಲ್ಲಿ ಮಂಗಳವಾರ ಮುಸ್ಸಂಜೆ ಹೊತ್ತಲ್ಲಿ ನಡೆದಿದೆ. ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಸಾವನ್ನಪ್ಪಿದ ವ್ಯಕ್ತಿ.
ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಇಂದು ಸಂಜೆ ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.


ಶಶೀಂದ್ರ ಅವರಿಗೆ ಇಬ್ಬರು ಹೆಣ್ಮಕ್ಕಳಿದ್ದು ವಿವಾಹಿತರಾಗಿದ್ದಾರೆ. ಅವರ ಪತ್ನಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿದ್ದು ಬುಧವಾರ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ತಯಾರಿ ನಡೆದಿತ್ತು.
ಕಳೆದ ನವೆಂಬರ್ ತಿಂಗಳಲ್ಲಿ ವಾಝ್ಕೊ ರೆಸಾರ್ಟ್ ಗೆ ವೀಕೆಂಡ್ ಕಳೆಯಲು ಬಂದಿದ್ದ ಮೈಸೂರಿನ ಮೂವರು ಯುವತಿಯರು ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದೀಗ ಅದೇ ರೆಸಾರ್ಟ್ ಮುಂಭಾಗದಲ್ಲೇ ನುರಿತ ಈಜುಗಾರರೋರ್ವರು ಸಣ್ಣ ಬಾವಿಗೆ ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರಲ್ಲಿ ಯುವತಿಯರ ಪ್ರೇತಾತ್ಮಗಳ ಬಗ್ಗೆ ಆತಂಕ ಮನೆ ಮಾಡುವಂತಾಗಿದೆ.
Uchila man slips falls into old well accidentally, dies on spot in Mangalore. The deceased has been identified as Shashindra.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm