ಬ್ರೇಕಿಂಗ್ ನ್ಯೂಸ್
15-12-20 12:32 pm Mangalore Correspondent ಕರಾವಳಿ
ಬೆಂಗಳೂರು, ಡಿ.15: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಚಾರಿಟೆಬಲ್ ಎಂಡೋಮೆಂಟ್ ಕಾಯ್ದೆ (ಎಚ್ಆರ್ಐಸಿಇ ಕಾಯ್ದೆ) ಅನ್ವಯ, ಹಿಂದೂ ಧರ್ಮದವರ ಹೊರತಾಗಿ ಇತರರು ಧಾರ್ಮಿಕ ಇಲಾಖೆ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬಾರದು ಎಂಬ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ದೂರಿನ ಬಗ್ಗೆ ವಾದ ಆಲಿಸಿದ ಬಳಿಕ "ಹಿಂದೂ ಧರ್ಮ ಎಂದೂ ಸಂಕುಚಿತವಲ್ಲ ; ಹಿಂದೂ ಧರ್ಮ ಇಷ್ಟೊಂದು ಸಂಕುಚಿತ ಮನೋಭಾವದವರನ್ನು ಒಳಗೊಂಡಿಲ್ಲ" ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನ ಜಾರಿಯಲ್ಲಿರುವ ದೇಶದಲ್ಲಿ ನಾವು ಇಂತಹ ಅರ್ಜಿಗಳನ್ನು ನ್ಯಾಯಾಲಯದಲ್ಲಿ ಪರಿಗಣಿಸುವುದಿಲ್ಲ. ನಮ್ಮನ್ನು 100 ವರ್ಷ ಹಿಂದೆ ತೆಗೆದುಕೊಂಡು ಹೋಗುವಂತಹ ಅರ್ಜಿಗಳನ್ನು ಸ್ವೀಕರಿಸಲಾಗದು " ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.


ಎಚ್ಆರ್ಐಸಿಇ ಕಾಯ್ದೆಯ ಸೆಕ್ಷನ್ 7ರ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದರ ಅನ್ವಯ ಈ ಕಾಯ್ದೆಯಡಿ ರಚಿಸಿದ ಆಯುಕ್ತರ ಕಚೇರಿಯಲ್ಲಿ ಹಿಂದೂ ಧರ್ಮದವರನ್ನು ಹೊರತುಪಡಿಸಿ ಇತರರು ಸೇವೆ ಸಲ್ಲಿಸಲು ಅವಕಾಶ ನೀಡಬಾರದು ಎಂದು ಕೋರಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದಾಗ ಐಎಎಸ್ ಅಧಿಕಾರಿ ಎ.ಬಿ.ಇಬ್ರಾಹಿಂ ಅವರ ಹೆಸರನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿರುವುದನ್ನು ಅರ್ಜಿದಾರ ಎನ್.ಪಿ.ಅಮೃತೇಶ್ ಪ್ರಶ್ನಿಸಿದ್ದರು. ಇದಲ್ಲದೆ ಆಯುಕ್ತರ ಕಚೇರಿ ಅಧೀಕ್ಷಕರಾಗಿ ಮುಹಮ್ಮದ್ ದೇಶವ್ ಅಲಿಖಾನ್ ಅವರನ್ನು ನೇಮಕ ಮಾಡಿದ್ದನ್ನು ಭಾರತ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಇನ್ನೊಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಅರ್ಜಿಗಳನ್ನು ವಜಾಗೊಳಿಸಿದೆ.
"ಉಪ ಆಯುಕ್ತರು ಸಿದ್ಧತೆಗಳ ಮೇಲ್ವಿಚಾರಣೆಗೆ ದೇವಸ್ಥಾನ ಪ್ರವೇಶಿಸಿದರೆ ಸ್ವರ್ಗ ಕೆಳಗೆ ಬೀಳುತ್ತದೆಯೇ? ಹಿಂದು ಧರ್ಮ ಎಂದೂ ಸಂಕುಚಿತವಲ್ಲ; ಹಿಂದೂ ಧರ್ಮ ಇಷ್ಟೊಂದು ಸಂಕುಚಿತ ಮನೋಭಾವದವರನ್ನು ಒಳಗೊಂಡಿಲ್ಲ" ಎಂದು ನ್ಯಾಯಪೀಠ ಹೇಳಿದೆ.
The Karnataka High Court on Monday dismissed writ petitions which sought for directions that non-Hindus should not be permitted to work in the office of Commissioners under the Karnataka Hindu Religious Institutions and Charitable Endowments Act(HRICE Act).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am