ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm