ಬ್ರೇಕಿಂಗ್ ನ್ಯೂಸ್
04-01-25 08:57 pm Mangalore Correspondent ಕರಾವಳಿ
ಮಂಗಳೂರು, ಜ.4: ಪುತ್ತೂರಿನ ಕಬಕದಲ್ಲಿರುವ ಮಹಮ್ಮದಿಯಾ ಟ್ರಾವೆಲ್ ಏಜೆನ್ಸಿ ಹೆಸರಲ್ಲಿ ಆಶ್ರಫ್ ಸಖಾಫಿ ಪರ್ಪುಂಜೆ ಎಂಬವರು ಉಮಾ ಯಾತ್ರೆಗಾಗಿ ಸುಮಾರು 172 ಜನರನ್ನು ಪವಿತ್ರ ಮೆಕ್ಕಾಕ್ಕೆ ಕರೆದೊಯ್ದು ಮದೀನಾದಲ್ಲಿ ಬಿಟ್ಟು ಬಂದು ವಂಚನೆ ಮಾಡಿದ್ದಾರೆ. ಮದೀನಾದಲ್ಲಿ ಸಿಕ್ಕಿಬಿದ್ದು ಅನ್ನಾಹಾರವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದು ನನ್ನ ಗಮನಕ್ಕೆ ಬರುತ್ತಲೇ ಸೌದಿಯಲ್ಲಿರುವ ಸ್ನೇಹಿತರನ್ನು ಸಂಪರ್ಕಿಸಿ ಯಾತ್ರಾರ್ಥಿಗಳನ್ನು ತಾಯ್ನಾಡಿಗೆ ತಲುಪಿಸುವ ವ್ಯವಸ್ಥೆ ಮಾಡಿರುತ್ತೇನೆ. ಈ ಸಂಸ್ಥೆಯ ಲೈಸನ್ಸ್ ಕೂಡಲೇ ರದ್ದುಪಡಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಶಾಸಕ ಮೊಯಿದೀನ್ ಬಾವಾ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿಕ್ಕಿಬಿದ್ದ ಯಾತ್ರಾರ್ಥಿಗಳಲ್ಲಿ ಕೆಲವರು ತಮ್ಮ ಸ್ವಂತ ಖರ್ಚಿನಲ್ಲಿ ರಿಟರ್ನ್ ಟಿಕೆಟ್ ಪಡೆದು ಬಂದಿದ್ದರೆ ಇನ್ನುಳಿದ 58 ಮಂದಿಗೆ ನನ್ನ ಸ್ನೇಹಿತರ ಮುಖಾಂತರ ಟಿಕೆಟ್ ತೆಗೆಸಿ ಊರಿಗೆ ಮರಳಿಸುವ ವ್ಯವಸ್ಥೆಯನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.

ರಿಟರ್ನ್ ಟಿಕೇಟ್ ಪಡೆಯದೇ ಡಮ್ಮಿ ಟಿಕೇಟ್ ತೋರಿಸಿ ವಂಚಿಸುವ ಇಂತಹ ಟ್ರಾವೆಲ್ ಏಜೆನ್ಸಿಯ ವಿರುದ್ದ ಹಾಗೂ ಇದಕ್ಕೆ ಅನುವು ಮಾಡಿಕೊಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಸಾರ್ವಜನಿಕರನ್ನು ವಂಚಿಸುವ ಇಂತಹ ಟ್ರಾವೆಲ್ ಏಜೆನ್ಸಿಗಳ ಲೈಸನ್ಸ್ ರದ್ದು ಪಡಿಸಬೇಕೆಂದು ಮೊಯ್ದೀನ್ ಬಾವಾ ಒತ್ತಾಯಿಸಿದ್ದಾರೆ.
ಅಲ್ಲಿ ಸಿಕ್ಕಿಬಿದ್ದ ಉಮ್ರಾ ಯಾತ್ರಾರ್ಥಿಗಳ ಪರಿಸ್ಥಿತಿ ತೀರಾ ಕೆಟ್ಟದ್ದಾಗಿತ್ತು. ಶುಗರ್ ಇನ್ನಿತರ ಕಾಯಿಲೆಯಿಂದ ಬಳಲುತ್ತಿದ್ದವರಿಗೆ ಸೂಕ್ತ ಚಿಕಿತ್ಸೆ ಯಾವುದೂ ಸಿಕ್ಕಿರಲಿಲ್ಲ. ನಾಮ್ ಕೆ ವಾಸ್ತೆ ಫಲಕ ಹಾಕಿಕೊಂಡು ಕಡಿಮೆ ಖರ್ಚಿಗೆ ಉಮ್ರಾ ಕರೆದುಕೊಂಡು ಹೋಗುತ್ತೇವೆ ಎಂದು ಜನರನ್ನು ಮಂಗ ಮಾಡುತ್ತಾರೆ. ಬುದ್ಧಿವಂತ ಜಿಲ್ಲೆಯ ಜನರು ಇದನ್ನು ನಂಬಬಾರದು. ರಿಟರ್ನ್ ಟಿಕೆಟ್ ಖಚಿತ ಪಡಿಸಿಕೊಂಡೇ ಹೋಗಬೇಕು ಎಂದು ಹೇಳಿದರು.
ಯಾವುದೇ ರೀತಿಯಲ್ಲಿ ಜನ ಮೋಸ ಹೋಗಬಾರದು. ದೇಶದಲ್ಲೇ ಈ ರೀತಿಯಾದರೆ ಪರವಾಗಿಲ್ಲ. ವಿದೇಶಕ್ಕೆ ಕರೆದುಕೊಂಡು ಹೋಗಿ ಮೋಸ ಮಾಡಿದರೆ ಇದಕ್ಕೆ ಹೊಣೆ ಯಾರು? ಇದರ ವಿರುದ್ಧ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಕರೆದುಕೊಂಡು ಹೋದ ಜನ ಊರಲ್ಲಿ ಬಂದು ಎಲ್ಲವನ್ನು ತಾನೇ ನಿಭಾಯಿಸಿದ್ದಾಗಿ ಹೇಳುತ್ತಾರೆ. ಇದು ಖಂಡನೀಯ“ ಎಂದು ಬಾವಾ ಕಿಡಿಕಾರಿದ್ದಾರೆ.
Puttur kabaka Travel Agency MUHAMMADIYA cheats 172 Muslim pilgrims slams Mohiuddin Bava by issuing no return ticket to the Haj pilgrims. Demands action against the travel agency.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm