ಬ್ರೇಕಿಂಗ್ ನ್ಯೂಸ್
05-01-25 02:13 pm Mangalore Correspondent ಕರಾವಳಿ
ಮಂಗಳೂರು, ಜ.5 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜೊತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್ ಅನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವಿಶ್ವದರ್ಜೆ ಶಿಕ್ಷಣ ಸಂಸ್ಥೆಗಳು ಇರುವ ಹಿನ್ನಲೆಯಲ್ಲಿ ಸೈನಿಕ ಶಾಲೆ ಸ್ಥಾಪಿಸುವುದು ಶೈಕ್ಷಣಿಕವಾಗಿಯೂ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.





ದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್ ಪ್ರಾಂಜಲ್ ಹಾಗೂ ಕಮಾಂಡರ್ ಜಾರ್ಜ್ ಮಾರ್ಟಿಸ್ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ
ತಮ್ಮ ಭೇಟಿ ವೇಳೆ ಕ್ಯಾ. ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ತರಬಹುದಾದ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರಾಜನಾಥ್ ಸಿಂಗ್ ಅವರಿಂದ ಮಾರ್ಗದರ್ಶನವನ್ನು ಪಡೆದುಕೊಂಡರು. ಇದೇ ವೇಳೆ ಕ್ಯಾ. ಚೌಟ ಅವರು ಸಚಿವ ರಾಜನಾಥ್ ಸಿಂಗ್ ಅವರಿಗೆ ಕರಾವಳಿಯ ಸಂಸ್ಕೃತಿ ಸಂಕೇತವಾದ ಕಂಬಳದ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
Dakshina Kannada MP Capt Brijesh Chowta met with Defence Minister Rajnath Singh to propose significant defence infrastructure initiatives for the district, including the establishment of a Sainik School and a military base in Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm