ಬ್ರೇಕಿಂಗ್ ನ್ಯೂಸ್
06-01-25 08:04 pm Mangalore Correspondent ಕರಾವಳಿ
ಉಳ್ಳಾಲ, ಜ.6: ರಾಜ್ಯದಲ್ಲಿ ಎಲ್ಲಾ ಸಮುದಾಯಗಳಿಗೂ ಅಭಿವೃದ್ಧಿ ನಿಗಮಗಳಿವೆ. ಆದರೆ ಯಾವುದೇ ಸರಕಾರ ಬಂದರೂ ಇದುವರೆಗೂ ಬ್ಯಾರಿ ಸಮುದಾಯದ ಅಭಿವೃದ್ಧಿಗೆ ನಿಗಮ ನೀಡಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾರಿ ಸಮುದಾಯದವರಿದ್ದು, ಎಲ್ಲಾ ಸಮುದಾಯಕ್ಕೆ ನಿಗಮ ನೀಡಿದಂತೆ ಬ್ಯಾರಿ ಸಮುದಾಯಕ್ಕೂ ನಿಗಮ ನೀಡಬೇಕು ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಜನವರಿ 8ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ 'ಬ್ಯಾರಿ ಜಿಲ್ಲಾ ಪ್ರತಿನಿಧಿಗಳ ಸಮಾವೇಶ'ದ ಪೂರ್ವಭಾವಿ ಸೋಮವಾರ ತೊಕ್ಕೊಟ್ಟಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬ್ಯಾರಿ ಸಮುದಾಯದವರು ವಿದೇಶದಲ್ಲಿ ದುಡಿದರೂ ಅಥವಾ ಊರಿನಲ್ಲೇ ವ್ಯಾಪಾರ ನಡೆಸಿದರೂ ದೇಶದ ಆರ್ಥಿಕತೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇತ್ತೀಚಿಗೆ ವಿದೇಶದಲ್ಲೂ ಕೆಲಸ ನಿರ್ವಹಿಸಲು ಸಂಕಷ್ಟ ಎದುರಾಗಿದೆ. ಶಿಕ್ಷಣ ಮತ್ತು ಸರ್ಕಾರಿ ಹುದ್ದೆಗಳನ್ನ ಪಡೆಯುವಲ್ಲಿ ಬ್ಯಾರಿ ಸಮುದಾಯವು ತೀರಾ ಹಿಂದುಳಿದಿದೆ. ಒಬಿಸಿಯಲ್ಲಿ ಈ ಹಿಂದೆ ಶೇ.4ರಷ್ಟು ಮೀಸಲಾತಿ ಮಾತ್ರ ಇತ್ತಾದರೂ ಹಿಂದಿನ ಸರ್ಕಾರ ಅದನ್ನೂ ರದ್ದುಪಡಿಸಿದೆ. ಒಬಿಸಿಯಲ್ಲೂ ಶೇ.10ರಷ್ಟು ಮೀಸಲಾತಿ ಏರಿಕೆ ಮಾಡಬೇಕು. ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದರೆ ಸಮುದಾಯದ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಾಧ್ಯ. ಈ ಎಲ್ಲಾ ಬೇಡಿಕೆಗಳ ಆಗ್ರಹಕ್ಕಾಗಿ ಜ.8 ರಂದು ನಗರದ ಪುರಭವನದಲ್ಲಿ ಬ್ಯಾರಿ ಸಮುದಾಯದ ಜಿಲ್ಲಾ ಪ್ರತಿನಿಧಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಸಮುದಾಯ ಭಾಂದವರು ಭಾಗವಹಿಸಿ ತಮ್ಮ ಸಮಸ್ಯೆ, ಅಹವಾಲುಗಳನ್ನ ಸಲ್ಲಿಸುವಂತೆ ಹನೀಫ್ ಹಾಜಿ ಹೇಳಿದರು.


ಮೇಲಂಗಡಿ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ ಮಾತನಾಡಿ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಸಮುದಾಯದ ಮಕ್ಕಳಿಗೆ ಶಿಕ್ಷಣವಾಗಲಿ, ಇತರ ಸವಲತ್ತುಗಳಾಗಲಿ ಸಿಗುತ್ತಿಲ್ಲ. ಹಾಡುಗಾರರು, ಸಾಹಿತಿಗಳು, ಕಲಾವಿದರಿಗಷ್ಟೇ ಅಕಾಡೆಮಿ ಸೀಮಿತವಾಗಿದೆ. ನಿಗಮ ಸ್ಥಾಪನೆಯಾದರೆ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್, ವೈದ್ಯಕೀಯ ಚಿಕಿತ್ಸೆ, ವಸತಿ ಯೋಜನೆಯಂತಹ ಅನೇಕ ಸವಲತ್ತುಗಳನ್ನ ಪಡೆಯಬಹುದಾಗಿದೆ ಎಂದರು.
ಪ್ರಮುಖರಾದ ಉಸ್ಮಾನ್ ಕಲ್ಲಾಪು, ಖುಬೈಬ್ ತಂಙಳ್, ಮನ್ಸೂರ್ ಮಂಚಿಲ, ಖಲೀಲ್ ಮುಕ್ಕಚ್ಚೇರಿ, ಮಹಮ್ಮದ್ ಇಸ್ಹಾಕ್, ಅಬ್ದುಲ್ ರಹ್ಮಾನ್, ಸಮೀರ್ ಕಲ್ಲಾಪು,ಸದ್ದಾಂ ಹುಸೈನ್, ಶೌಕತ್ ಕೋಟೆಪುರ, ಕೆ.ಎಸ್.ಮೊಯಿದ್ದೀನ್ ಕುಂಞಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Demand for establishment of corporation for Beary community, District convention to be held in Mangalore on January 8th
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm