ಬ್ರೇಕಿಂಗ್ ನ್ಯೂಸ್
06-01-25 08:29 pm Mangalore Correspondent ಕರಾವಳಿ
ಮಂಗಳೂರು, ಜ.6: ಅಪರೂಪದಲ್ಲಿ ಅಪರೂಪ ಎನ್ನುವಂತೆ ಮಹಿಳೆಯೊಬ್ಬರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಎಂಬವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಅತ್ಯಂತ ಅಪರೂಪದ ಪ್ರಕರಣ ಎಂದೆನಿಸಿದೆ. 30 ವಾರಗಳಲ್ಲಿ ಅಂದರೆ ತಿಂಗಳು ಭರ್ತಿಯಾಗದೆ ಹೆರಿಗೆಯಾಗಿದ್ದು ನಾಲ್ಕು ಮಕ್ಕಳಿದ್ದುದರಿಂದ ಮಹಿಳೆಯನ್ನು ಏಳು ತಿಂಗಳಲ್ಲಿ ಸಿಸೇರಿಯನ್ ಮಾಡಲಾಗಿದೆ. ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ. ಸ್ತ್ರೀರೋಗ ತಜ್ಞೆ ಡಾ.ಜೋಯ್ಲೀನ್ ಡಿ ಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದ್ದು ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ತಾಯಿ- ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ. ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ ಎನ್ನಲಾಗಿದೆ.
In a remarkable and heartwarming event in Mangalore, a mother gave birth to quadruplets at Fr. Muller's Hospital during her seventh month of pregnancy. Celebrations erupted as the hospital staff and family welcomed the safe arrival of four precious babies—two boys and two girls—all of whom are reported to be healthy and thriving.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm