ಬ್ರೇಕಿಂಗ್ ನ್ಯೂಸ್
08-08-20 04:18 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 8: ಲಾಕ್ ಡೌನ್ ಬಳಿಕ ಕೇಂದ್ರ ಸರಕಾರ ಅನ್ ಲಾಕ್ - 3 ಘೋಷಣೆಯಲ್ಲಿ ಅಂತಾರಾಜ್ಯ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು. ಆದರೆ, ಈ ಆದೇಶ ಕಾಸರಗೋಡು - ಮಂಗಳೂರು ನಡುವಿನ ಸಂಚಾರಕ್ಕೆ ಮಾತ್ರ ಅನ್ವಯವಾಗಿಲ್ಲ. ಕೇರಳ ಸರಕಾರ ಮತ್ತು ಕಾಸರಗೋಡು ಜಿಲ್ಲಾಡಳಿತದ ಜಿಗುಟುತನದಿಂದಾಗಿ ಈ ಭಾಗದ ಜನ ಹೈರಾಣಾಗಿ ಹೋಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಗಡಿಭಾಗದಲ್ಲಿ ಕೇರಳ ಸರಕಾರ ತಡೆಬೇಲಿ ಹಾಕಿರುವುದು ನಿತ್ಯ ಸಂಚಾರ ಮಾಡುವ ಅಲ್ಲಿನ ಜನರ ಕುತ್ತಿಗೆ ಹಿಡಿದಿದೆ. ಕಾಸರಗೋಡಿನ ಎರಡು ಸಾವಿರಕ್ಕೂ ಹೆಚ್ಚು ಜನ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉದ್ಯೋಗದಲ್ಲಿದ್ದು ಕಳೆದ ಹಲವಾರು ವರ್ಷಗಳಿಂದ ನಿತ್ಯವೂ ಬಂದು ಹೋಗುತ್ತಿದ್ದರು. ಆದರೆ, ಕಳೆದ ಆರು ತಿಂಗಳಲ್ಲಿ ಕೊರೊನಾ ಲಾಕ್ ಡೌನ್ ಈ ಭಾಗದ ಜನರನ್ನು ಸಂಕಷ್ಟಕ್ಕೆ ದೂಡಿದೆ. ಕರ್ನಾಟಕ ಈಗ ಪೂರ್ತಿಯಾಗಿ ವಹಿವಾಟಿಗೆ ತೆರೆದುಕೊಂಡಿದ್ದರೂ ಕೇರಳ ಸರಕಾರ ಮಾತ್ರ ಕೊರೊನಾ ಹಬ್ಬುವ ನೆಪದಲ್ಲಿ ಗಡಿಯನ್ನು ಮುಚ್ಚಿದ್ದು ಇನ್ನೂ ತೆರೆದಿಲ್ಲ. ಈ ಭಾಗದ ಜನ ಜಿಲ್ಲಾಡಳಿತ ಮತ್ತು ಕೇರಳ ಸರಕಾರಕ್ಕೆ ಮನವಿಗಳ ಮೇಲೆ ಮನವಿ ಸಲ್ಲಿಸಿದರೂ ಆಡಳಿತ ಮಾತ್ರ ಓಗೊಟ್ಟಿಲ್ಲ. ಸದ್ಯಕ್ಕೆ ತೆರೆಯುವ ಸೂಚನೆಯೂ ಇಲ್ಲವಾಗಿದೆ. ಅದರ ಬದಲಿಗೆ ಮತ್ತೆ ಪಾಸ್ ವ್ಯವಸ್ಥೆ ಜಾರಿಗೆ ತರುವ ಭರವಸೆ ನೀಡಿದೆ. ಆದರೆ, ಪಾಸ್ ಪಡೆದು ತೆರಳಲು ಮುಂದಾಗುವ ಮಂದಿ ಗಡಿಯಲ್ಲಿ ವಾರಕ್ಕೊಮ್ಮೆ ರಾಪಿಡ್ ಟೆಸ್ಟ್ ಮಾಡಬೇಕೆಂದು ಷರತ್ತು ವಿಧಿಸಿದೆ. ಜೊತೆಗೆ, ಈ ಟೆಸ್ಟ್ ಮಾಡಿಕೊಳ್ಳಲು 800 ರೂಪಾಯಿ ಮೊತ್ತ ಪಾವತಿಸಬೇಕು ಎಂದಿರುವುದು ಇಲ್ಲಿನ ಜನರನ್ನು ಬೆಂಕಿಯಿಂದ ಬಾಣಲೆಗೆ ಹಾಕುವ ಯತ್ನ ಎನ್ನುವ ಮಾತು ಕೇಳಿಬಂದಿದೆ. ಮೊದಲೇ ಕೆಲಸ ಇಲ್ಲದೆ, ಹಣವೂ ಇಲ್ಲದೆ ಬವಣೆ ಪಡುತ್ತಿರುವ ಜನರನ್ನು ಟೆಸ್ಟ್ ನೆಪದಲ್ಲಿ ಮತ್ತೊಂದು ಸಂಕಷ್ಟಕ್ಕೆ ನೂಕಿದ್ದಾಗಿ ಇಲ್ಲಿನ ಮಂದಿ ಹೇಳುತ್ತಿದ್ದಾರೆ.

ಇಷ್ಟಕ್ಕೂ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿ ಮುಚ್ಚಿದ್ದಾಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಸರಗೋಡು ಸಂಸದ ಉಣ್ಣಿತ್ತಾನ್ ಈಗ ಮೌನವಾಗಿದ್ದಾರೆ. ಕೊರೊನಾ ಹರಡುತ್ತಲೇ ಇದ್ದು ಅದರ ಜೊತೆಗೆ ಬದುಕಬೇಕು ಎಂದು ಕೇಂದ್ರ ಸರಕಾರ ಸೂಚನೆ ನೀಡಿದ್ದರೂ, ಕಾಸರಗೋಡು ಜಿಲ್ಲಾಡಳಿತ ಮಾತ್ರ ತನ್ನದು ಬೇರೆಯೇ ರೀತಿ ಅನ್ನುವ ನಿಯಮ ಹೇರುತ್ತಿದೆ. ಜನರು ಸಂಕಷ್ಟಕ್ಕೀಡಾಗಿರುವಾಗ ಸಂಸದರು ಈಗ ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದಾರೆಯೇ ಎನ್ನುವ ಪ್ರಶ್ನೆಯನ್ನು ಜನರು ಮುಂದಿಡುತ್ತಿದ್ದಾರೆ. ಆದರೆ ಜನಸಾಮಾನ್ಯರ ಪ್ರಶ್ನೆಗೆ ಮಾತ್ರ ಕೇರಳದ ಎಡರಂಗ ಸರಕಾರ ಉತ್ತರ ನೀಡುತ್ತಿಲ್ಲ. ಬದಲಿಗೆ, ಜನ ಮಂಗಳೂರಿಗೆ ತೆರಳದೆ ಇಲ್ಲಿಯೇ ಉದ್ಯೋಗ ಕಂಡುಕೊಳ್ಳಲಿ ಎಂದು ಬಿಟ್ಟಿ ಸಲಹೆ ನೀಡುತ್ತಿದೆಯಂತೆ. ಈ ಬಗ್ಗೆ ಆಡಳಿತಾರೂಢ ಎಡರಂಗದ ನಾಯಕರಲ್ಲಿ ಕೇಳಿದರೂ, ಇದೇ ಬಿಟ್ಟಿ ಸಲಹೆ ನೀಡುತ್ತಿರುವುದು ಜನರನ್ನು ಆಕ್ರೋಶಕ್ಕೀಡುಮಾಡಿದೆ. ಹೀಗಾಗಿ, ಈ ಭಾಗದ ಜನರ ಪಾಡು ಮಾತ್ರ ಅತ್ತ ದರಿ, ಇತ್ತ ಪುಲಿ ಅನ್ನುವಂತಾಗಿದೆ. ಜಿಲ್ಲಾಡಳಿತದ ಸೂಚನೆಯನ್ನು ಪಾಲನೆ ಮಾಡದೆ ಇರಲೂ ಆಗದು. ಇತ್ತ ಬದುಕಿಗಾಗಿ ಉದ್ಯೋಗ ಮಾಡದೇ ಇರುವುದೂ ಸಾಧ್ಯವಿಲ್ಲ. ಸಂದಿಗ್ಧ ಸ್ಥಿತಿಯಲ್ಲಿರುವ ಅದೆಷ್ಟೋ ಜನ ಈಗ ಇದ್ದ ಉದ್ಯೋಗವನ್ನೂ ಕಳಕೊಳ್ಳುತ್ತಿದ್ದಾರೆ. ಮುಂದೇನು ಎಂಬ ಭಯದಲ್ಲಿ ಕಾಲ ಕಳೆಯುತ್ತಿದ್ದಾರೆ.

ಈ ನಡುವೆ, ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಗಡಿ ತೆರವಿಗಾಗಿ ಹೈಕೋರ್ಟ್ ಕದ ತಟ್ಟಿದ್ದಾರೆ. ಸೋಮವಾರ ಈ ಕುರಿತ ಅರ್ಜಿ ವಿಚಾರಣೆಗೆ ಬರಲಿದೆ ಎಂದು ಶ್ರೀಕಾಂತ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಹೈಕೋರ್ಟ್ ವಿಚಾರಣೆ ಬಳಿಕ ಈ ಭಾಗದ ಜನರ ಬವಣೆ ತಪ್ಪಲಿದೆ ಅನ್ನುವ ಆಶಾಭಾವ ಇಲ್ಲಿನ ಜನರದ್ದು.
I have filed a Public Interest Litigation (PIL) before Hon'ble #HighCourt of Kerala challanging interstate travel restriction & road blockage by #Kasaragod administration. High Court will consider the case for hearing on 10/8/20, Monday. Let's fight for #FreeMovement. #Justice
— Adv. K. Shreekanth (@AdvkShreekanth) August 8, 2020
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm