ಬ್ರೇಕಿಂಗ್ ನ್ಯೂಸ್
11-01-25 04:57 pm Mangaluru Correspondent ಕರಾವಳಿ
ಮಂಗಳೂರು, ಜ.11: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಸಿದ್ಧತೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ಕ್ಷೇತ್ರದ ನರಿಂಗಾನದಲ್ಲಿ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳಕ್ಕೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ಕದ್ರಿ- ನಂತೂರು ರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು. ಇದನ್ನರಿತ ಪೊಲೀಸರು ಮುಖ್ಯಮಂತ್ರಿ ಬರುವ ಮೊದಲೇ ಬಿಕೆ ಇಮ್ತಿಯಾಜ್ ನೇತೃತ್ವದಲ್ಲಿ ಸೇರಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.




ಕಮ್ಯುನಿಸ್ಟ್ ಮತ್ತು ಡಿವೈಎಫ್ಐ ವತಿಯಿಂದ ಜನಪರ ವಿಚಾರಗಳಲ್ಲಿ ಪ್ರತಿಭಟನೆ ನಡೆಸಿದ್ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾಗಲೂ ಮುನೀರ್ ಕಾಟಿಪಳ್ಳ ಸೇರಿದಂತೆ ಕೆಲವರ ವಿರುದ್ಧ ಕೇಸು ದಾಖಲಿಸಲಾಗಿತ್ತು. ಇದನ್ನ ವಿರೋಧಿಸಿ ಕಮ್ಯುನಿಸ್ಟ್ ಮತ್ತು ಇತರ ಸಂಘಟನೆಗಳು ಪೊಲೀಸ್ ಕಮಿಷನರ್ ವಿರುದ್ಧ ಸರಣಿ ಪ್ರತಿಭಟನೆ ನಡೆಸಿದ್ದವು.
ಆದರೆ ಜಿಲ್ಲೆಯವರೇ ಆದ ಸ್ಪೀಕರ್ ಯುಟಿ ಖಾದರ್, ಕಮ್ಯುನಿಸ್ಟರ ಪ್ರತಿಭಟನೆಗೆ ಸೊಪ್ಪು ಹಾಕಿರಲಿಲ್ಲ. ಕಮಿಷನರ್ ಅವರನ್ನು ಸಮರ್ಥನೆಯನ್ನೇ ಮಾಡಿದ್ದರು. ಇದೀಗ ಖಾದರ್ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬರುವಾಗಲೇ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು, ಮುಖ್ಯಮಂತ್ರಿ ಗಮನ ಸೆಳೆಯುವ ಯತ್ನ ಮಾಡಿದ್ದಾರೆ. ಅದಕ್ಕೂ ಮೊದಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
DYFI activists gherao CM Siddaramaiahs car in Mangalore, demanding suspension of Police Commissioner IPS Anupam Agrawal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm