ಬ್ರೇಕಿಂಗ್ ನ್ಯೂಸ್
            
                        13-01-25 08:43 pm Mangalore Correspondent ಕರಾವಳಿ
            ಮಂಗಳೂರು, ಜ.13: ಕಲಾಕೃತಿಯನ್ನು ಕೈಯಲ್ಲಿ ಮೂಡಿಸುವುದೇ ಒಂದು ಕೈಚಳಕ. ಕುಳಿತಲ್ಲೇ ಪೆನ್ಸಿಲ್ ನಲ್ಲಿ ಭಾವಚಿತ್ರ ಬಿಡಿಸುವುದು ಕೆಲವರಿಗಷ್ಟೇ ಒಲಿಯುವ ಅಪರೂಪದ ಕಲೆಗಾರಿಕೆ. ಅಂತಹ ಅದ್ಭುತ ಕಲಾವಿದರು ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಒಂದೇ ಕಡೆ ಸೇರಿದ್ದರು. ಹೌದು.. ಕಲಾ ಪರ್ಬ ಎನ್ನುವ ಹೆಸರಲ್ಲಿ ಕಲಾವಿದರ ಮೇಳವನ್ನು ನಗರದ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾಡಳಿತ ಮತ್ತು ಶರಧಿ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಕಲಾಮೇಳ ಜ.11-12ರಂದು ಅದ್ಭುತವಾಗಿ ಮೂಡಿಬಂದಿತ್ತು.
ರಾಜ್ಯದ ಉದ್ದಗಲದಿಂದ ಸುಮಾರು 108 ಕಲಾಕಾರರು ಮಂಗಳೂರಿಗೆ ಬಂದು ತಮ್ಮ ಸ್ಟಾಲ್ ಹಾಕಿದ್ದರು. ಕುಳಿತಲ್ಲೇ ಕಲಾಕೃತಿ ಬಿಡಿಸಿಡುತ್ತಿದ್ದರು. ಸಾರ್ವಜನಿಕರು ತಮ್ಮ ಮುಖಭಾವದ ಪೆನ್ಸಿಲ್ ಚಿತ್ರವನ್ನು ಕಲಾವಿದರಿಂದ ಬಿಡಿಸಿಕೊಳ್ಳುತ್ತಿದ್ದರು. ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಉಡುಪಿ ಸೇರಿದಂತೆ ವಿವಿಧ ಕಡೆಯ ಕಲಾವಿದರು ಬಂದಿದ್ದರು. ಯಕ್ಷಗಾನ, ಆಕರ್ಷಕ ಸೀನರಿಗಳು, ಖ್ಯಾತನಾಮರ ಚಿತ್ರಗಳನ್ನು ಕ್ಯಾನ್ವಾಸ್ ರೂಪದಲ್ಲಿ ಮಾರಾಟಕ್ಕಿಟ್ಟಿದ್ದರು. ಸಂಜೆಯಾಗುತ್ತಿದ್ದಂತೆ ಮತ, ಭೇದ ಲೆಕ್ಕಿಸದೆ ಎಲ್ಲ ವರ್ಗದ ಜನರೂ ಕದ್ರಿಗೆ ಬಂದು ಒಂದೆಡೆ ಸೇರಿದ್ದು ವಿಶೇಷವಾಗಿತ್ತು.
ಕಲಾಮೇಳದ ಬಗ್ಗೆ ಶರಧಿ ಪ್ರತಿಷ್ಠಾನದ ಪುನೀಕ್ ಶೆಟ್ಟಿ ಅವರಲ್ಲಿ ಕೇಳಿದಾಗ, ಕಲಾವಿದರ ಪಾಲಿಗೆ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಇಂತಹ ಮೇಳ ಆಯೋಜಿಸಲಾಗಿತ್ತು. ರಾಜ್ಯದೆಲ್ಲೆಡೆಯ ಖ್ಯಾತನಾಮ ಕಲಾವಿದರು ಬಂದಿದ್ದರು. ಎರಡು ದಿನದಲ್ಲಿ ಕಲಾವಿದರಿಗೆ 13.86 ಲಕ್ಷ ರೂಪಾಯಿ ಗಳಿಕೆಯಾಗಿದೆ. ಸಾರ್ವಜನಿಕರ ಉತ್ತಮ ಸ್ಪಂದನೆಯಿಂದ ಕಲಾವಿದರು ಉತ್ಸಾಹಗೊಂಡಿದ್ದರು ಎಂದಿದ್ದಾರೆ.
















ಮಂಗಳೂರಿನ ಖ್ಯಾತ ಕಾರ್ಟೂನಿಸ್ಟ್ ಜಾನ್ ಚಂದ್ರನ್ ತಮ್ಮ ಕಾರ್ಟೂನ್ ಚಿತ್ರಗಳದ್ದೇ ಸ್ಟಾಲ್ ಹಾಕಿದ್ದರು. ಹಿರಿಯ ಕಲಾವಿದ ಕೋಟಿಪ್ರಸಾದ್ ಆಳ್ವರ ಪ್ರಸಾದ್ ಆರ್ಟ್ ಗ್ಯಾಲರಿ, ಕೆನರಾ ಆರ್ಟ್ ಕೊಡಿಯಾಲಗುತ್ತು, ಉಡುಪಿಯ ಖ್ಯಾತ ಕಲಾವಿದ ಜನಾರ್ದನ ಹಾವಂಜೆ, ಹಿರಿಯ ಕಲಾವಿದ ಗಣೇಶ್ ಸೋಮಯಾಜಿ ಅವರದ್ದೂ ಸ್ಟಾಲ್ ಇತ್ತು. ಮಂಗಳೂರಿನ ಆರ್ಟ್ ಸ್ಕೂಲಿನ ಸೈಯದ್ ಆಸಿಫ್ ಆಲಿ, ಬಿಜಿಎಂ ಚಿಲಿಂಬಿ ಆರ್ಟ್ ಸ್ಕೂಲ್ ನ ಸಮೀರ್ ಆಲಿ- ಶಬೀರ್ ಆಲಿ ಸೋದರರು, ಬೆಂಗಳೂರಿನ ಖ್ಯಾತ ಕಲಾವಿದ ಕೃಷ್ಣ ಚೆಟ್ಟಿಯಾರ್ ಮತ್ತಿತರರು ಪಾಲ್ಗೊಂಡಿದ್ದರು. ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತದಿಂದ ಕಲಾಪರ್ಬವನ್ನು ಆಯೋಜಿಸಿದ್ದರಿಂದ ಅಧಿಕಾರಿ ವರ್ಗದವರೂ ಕದ್ರಿಗೆ ಬಂದಿದ್ದರು.
ಇದಲ್ಲದೆ, ಶಾಲಾ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಸುಮಾರು 780 ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಸೆಳೆದರು. ಅಸ್ತ್ರ ಸಂಸ್ಥೆಯ ಲಾಂಚುಲಾಲ್ ಸೇರಿದಂತೆ ಹಲವು ಉದ್ಯಮಿಗಳು ಕಾರ್ಯಕ್ರಮಕ್ಕೆ ಸ್ಪಾನ್ಸರ್ ನೀಡಿದ್ದರು.
            
            
            Mangalore Kadri kalamela 2025, large people throng to see the event, 13 lakhs collected in two days event.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm