ಬ್ರೇಕಿಂಗ್ ನ್ಯೂಸ್
14-01-25 02:27 pm Mangalore Correspondent ಕರಾವಳಿ
ಮಂಗಳೂರು, ಜ.14 : ಸವಣೂರು, ಸುಬ್ರಹ್ಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ ಗೆ ಸೂಚನೆ ನೀಡಿದ್ದಾರೆ.
ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕುಸುಮ್ ಯೋಜನೆಯಡಿ ದೇಶದೆಲ್ಲೆಡೆ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸಿ ಗ್ರೀನ್ ಎನರ್ಜಿಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಸವಣೂರು, ಸುಬ್ರಹ್ಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಜಾಗ ಗುರುತಿಸುವಂತೆ ಸಚಿವಾಲಯದಿಂದ ಮೆಸ್ಕಾಂಗೆ ಪತ್ರ ಬಂದಿದೆ. ಹೀಗಾಗಿ, ಒಂದು ವಾರದೊಳಗೆ ಕಡಬ ತಾಲೂಕು ವ್ಯಾಪ್ತಿಯಲ್ಲಿ ಪಿಎಂ ಕುಸುಮ್ ಸೋಲಾರ್ ಪಾರ್ಕ್ ಸ್ಥಾಪನೆಗೆ ಸೂಕ್ತ ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ಅದರ ಸಾಧಕ- ಬಾಧಕಗಳ ಬಗ್ಗೆ ವರದಿ ನೀಡುವಂತೆ ಸಂಸದರು ತಹಶೀಲ್ದಾರರಿಗೆ ಸೂಚಿಸಿದ್ದಾರೆ.




ಕೋಡಿಂಬಾಳ ರೈಲು ಅಭಿವೃದ್ಧಿಯ ಭರವಸೆ
ಸಂಸದರು ತಾಲೂಕಿನ ಜನತೆಯ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದ ವೇಳೆ, ಕಡಬಕ ತಾಲೂಕಿನ ಕೋಡಿಂಬಾಳದ ರೈಲು ನಿಲ್ದಾಣವನ್ನು ಅಭಿವೃದ್ಧಿ ಪಡಿಸಿದರೆ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಮನವಿ ನೀಡಿದ್ದಾರೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಂಸದರು, ಸಂಬಂಧಪಟ್ಟವರ ಜತೆಗೆ ಚರ್ಚಿಸಿ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಶ್ರಮಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.
ಸಂಸದರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಮಿನಿ ವಿಧಾನ ಸೌಧದಲ್ಲಿ ಜನಜಂಗುಲಿ ನೆರೆದಿತ್ತು. ಸಣ್ಣಪುಟ್ಟ ಕೆಲಸ ಕಾರ್ಯಗಳಿಗೆ ಜನರನ್ನು ಅಲೆದಾಡಿಸದಂತೆ ಇದೇ ಸಂಧರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಬಿ.ಜೆ.ಪಿ ಪ್ರಮುಖರಾದ ಪುಲಸ್ತ್ಯ ರೈ, ಪ್ರಕಾಶ್ ಎನ್.ಕೆ, ಮಧುಸೂದನ್ ಕೊಂಬಾರು, ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಸುರೇಶ್ ದೆಂತಾರು, ರಮೇಶ ಕಲ್ಪುರೆ, ಅಶೋಕ್ ನೆಕ್ಕರೆ, ವಾಡ್ಯಪ್ಪ ಗೌಡ, ಸದಾಶಿವ ಶೆಟ್ಟಿ ಮಾರಂಗ, ಲಕ್ಷೀಶ ಪೆಲತ್ತಾರು ಸೇರಿದಂತೆ ಹಲವು ಮಂದಿ ಬಿ.ಜೆ.ಪಿ ಪ್ರಮುಖರು, ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Mangalore Dakshina Kannada MP Capt Brijesh Chowta directed Kadaba tahsildar to identify land for solar park in Kadaba taluk within a week.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm