ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am