ಬ್ರೇಕಿಂಗ್ ನ್ಯೂಸ್
15-01-25 12:09 pm Mangaluru Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
Mangalore Jail staff assaulted and threatened by A block jail inmates, case filed at barke police station
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm