ಬ್ರೇಕಿಂಗ್ ನ್ಯೂಸ್
            
                        15-01-25 12:09 pm Mangaluru Correspondent ಕರಾವಳಿ
            ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
            
            
            Mangalore Jail staff assaulted and threatened by A block jail inmates, case filed at barke police station
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm